ಬೆಂಗಳೂರಿನಲ್ಲಿ ಕೊರೋನಾ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಳ: ಸರ್ಕಾರದ ವಿರುದ್ದ ಹೆಚ್.ಕೆ ಪಾಟೀಲ್ ಕಿಡಿ… ಬೆಂಗಳೂರು,ಆಗಸ್ಟ್,31,2020(..): ಬೆಂಗಳೂರು ನಗರದಲ್ಲಿ ಜನವರಿ ತಿಂಗಳಿನಿಂದ ಜುಲೈ ತಿಂಗಳವರೆಗೆ ಸಾವುಗಳ ಸಂಖ್ಯೆ ಮಿತಿಮೀರಿದ ಪ್ರಮಾಣದಲ್ಲಿ ಹೆಚ್ಚಳ ಕಂಡಿದೆ. ಸೋಂಕಿತರ ಸಂಖ್ಯೆಗಳು ಜೂನ್ ದಿಂದೀಚೆಗೆ 7000-8000 ತಲುಪಿರುವ ವರದಿಯಾಗುತ್ತಿದೆ. ಬೆಂಗಳೂರು ನಗರವೊಂದರಲ್ಲಿಯೇ 2020ರ ಜನವರಿಯಿಂದ ಜುಲೈ ತಿಂಗಳವರೆಗೆ 49,135 ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಮಾಜಿ ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಕೆ ಪಾಟೀಲ್, ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಗಳಲ್ಲಿ ಪಾರ್ಥಿವ ಶರೀರಗಳ ಅಂತ್ಯಕ್ರಿಯೆಗಳ ಈ ಅಂಕಿ-ಸಂಖ್ಯೆ ಗಾಬರಿ ಹುಟ್ಟಿಸುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಅಂದರೆ ಜನೇವರಿಯಿಂದ ಜುಲೈವರೆಗೆ ಸಾವುಗಳ ಸಂಖ್ಯೆ 37,001 ಇದ್ದದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 12,136 ಜನರು ಹೆಚ್ಚುವರಿಯಾಗಿ ಸಾವಿಗೀಡಾಗಿರುವುದು ಬೆಚ್ಚಿಬೀಳಿಸಿರುವ ಕಳವಳಕಾರಿ ಪರಿಸ್ಥಿತಿ ಬಯಲಾಗಿದೆ. ಇದು ಶೇ. 32ರಷ್ಟು ಹೆಚ್ಚಳವನ್ನು ದಾಖಲಿಸಿದೆ. ಬೆಂಗಳೂರಿನಲ್ಲಿ ಕೊರೋನಾ ವೈರಸ್‍ನಿಂದ ಸಾವಿಗೀಡಾದವರ ಸಂಖ್ಯೆ ಮಾರ್ಚ್‍ನಿಂದ ಆಗಸ್ಟ್ ವರೆಗೆ 1,886 ಎಂದು ಸರ್ಕಾರ ಪ್ರಕಟಿಸಿದೆ. ಒಂದು ವೇಳೆ ಈ ಅಂಕಿ-ಸಂಖ್ಯೆಯೇ ಅಂತಿಮವಾಗಿದ್ದರೆ ಕೊರೋನೇತರ ಸಾವುಗಳ ಸಂಖ್ಯೆ 10,250 ಹೆಚ್ಚುವರಿ ಎಂದಾಯಿತು. 49,000 ಸಾವುಗಳಲ್ಲಿ ಕೇವಲ 1,886 ಕೋರೋನಾ ಸಾವುಗಳಾಗಿದ್ದರೆ 47,114 ಜನ ಕೊರೋನೇತರ ಕಾರಣಗಳಿಂದ ಮೃತಪಟ್ಟಿದ್ದಾರೆ. ಈ ಸಾವುಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗುವುದಕ್ಕೆ ಕಾರಣಗಳು ಏನು. ಈ ಸಾವಿನ ಅಂಕಿ-ಸಂಖ್ಯೆ ಮುಚ್ಚಿಡಲು ಕಾರಣಗಳೇನು? ಕೊರೋನಾ ಸಾವಿನ ಸಂಖ್ಯೆ ಕಡಿಮೆ ಪ್ರಮಾಣ ತೋರಿಸಲು ಈ ಅಚಾತುರ್ಯ/ದುರುದ್ದೇಶದ ಪ್ರಯತ್ನವಾಗಿದೆಯೇ. ಎಂದು ಪ್ರಶ್ನಿಸಿದರು. ಈ ಕುರಿತು ಮಾತನಾಡಿರುವ ಹೆಚ್.ಕೆ ಪಾಟೀಲ್ ಹೇಳಿದ್ದಿಷ್ಟು… ರಾಜ್ಯದಲ್ಲಿ ಸರ್ಕಾರ ಜನವರಿ ತಿಂಗಳಿಂದ ಇಲ್ಲಿಯವರೆಗೂ ಸಾವಿನ ಸಂಖ್ಯೆಗಳ ಲೆಕ್ಕಪರಿಶೋಧನೆ ಮತ್ತು ಸಾವಿನ ಕಾರಣಗಳ ವೈದ್ಯಕೀಯ ಪರಿಶೋಧನೆ ಮಾಡಿಯೇ ಇಲ್ಲ. ಇದರಿಂದಾಗಿ ವಾಸ್ತವಿಕವಾಗಿ ಸಾವು ಯಾವುದಕ್ಕೆ ಸಂಭವಿಸಿದೆ ಎಂಬುದನ್ನು ವೈಜ್ಞಾನಿಕವಾಗಿ ಪರಿಗಣಿಸಲು ಆಗಿಯೇ ಇಲ್ಲ. ಇದರ ಜೊತೆಗೆ ಸಾವಿನ ಕಾರಣಗಳ ವೈದ್ಯಕೀಯ ಪ್ರಮಾಣೀಕರಣ ( - ) ಮಾಡಬೇಕಾಗಿತ್ತು. ಒಂದು ವೇಳೆ ಬೆಂಗಳೂರಿನಲ್ಲಿ ಕೊರೋನಾ ಸಾವಿನ ಸಂಖ್ಯೆ ಕೇವಲ 1886 ಎಂದು ಮಾತ್ರವಿದ್ದರೆ, 10250 ಸಾಮಾನ್ಯ ಸಾವಿನ ಹೆಚ್ಚಳ(ಇತರೇ ಕಾರಣದಿಂದ) ಸಂಖ್ಯೆ ಅತ್ಯಂತ ಗಂಭೀರವಾದದ್ದೆ. ಸರಕಾರ ವಿವರಣೆ ನೀಡಬೇಕು. ಪ್ರಸಕ್ತ ವರ್ಷದಲ್ಲಿ ರಾಜ್ಯದಲ್ಲಿ ಉಸಿರಾಟದ ತೊಂದರೆಯಿಂದ ಶ್ವಾಸಕೋಶದ ಪರಿಣಾಮಕಾರಿ ಕಾರ್ಯನಿರ್ವಹಣೆಯ ವೈಫಲ್ಯದಿಂದ ಸಾವುಗಳ ಸಂಖ್ಯೆ ವಿಪರೀತವಾಗಿ ಹೆಚ್ಚಿದೆ. ಒಟ್ಟು ಆಕ್ಸಿಜನ್ ಕೊರತೆ, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಹೆಚ್.ಎಫ್.ಎನ್.ಸಿ ಅಳವಡಿಕೆಗೆ ಹಿಂದೇಟು. ಅಗತ್ಯ ತುರ್ತಿನ ಇಂಜಕ್ಷನ್‍ಗಳ ಪೂರೈಕೆಯಲ್ಲಿ ಅವಾಂತರ. ಈ ಹಿನ್ನೆಲೆಯಲ್ಲಿ ಕೊರೋನಾ ವೈರಸ್ ಸಾವುಗಳ ಸಂಖ್ಯೆ ವಿಪರೀತವಾಗಿ ಹೆಚ್ಚಿದ್ದು ಸ್ಪಷ್ಟವಾಗಿದೆ. ಬೆಂಗಳೂರು ನಗರ ಒಂದರಲ್ಲಿಯೇ ಸಾವಿನ ಸಂಖ್ಯೆ ಕಳೆದ ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಶೇ. 32ರಷ್ಟು ಹೆಚ್ಚಳ ಕಂಡಿರುವುದು ಗಂಭೀರವಾದ ಆಘಾತಕಾರಿ ಅಂಶವಾಗಿದೆ. ರಾಜ್ಯದಲ್ಲಿ ಉಸಿರಾಟದ ತೊಂದರೆಯಿಂದಲೇ ಮೃತರ ಸಂಖ್ಯೆ ಶೇ. 8.5ಕ್ಕೆ ಮುಟ್ಟಿದೆ ಎಂಬ ಅಂಕಿ-ಅಂಶ ಹರಿದಾಡುತ್ತಿದೆ. ಈ ಆಘಾತಕಾರಿ ಮಾಹಿತಿ ಬಚ್ಚಿಡುವಿಕೆ ಇಂಥ ಮಹಾಮಾರಿಯಿಂದಿರುವ ಸಂಕಷ್ಟ ಕಾಲದಲ್ಲಿ ಬಾರೀ ಅನಾಹುತಕ್ಕೆ ಕಾರಣವಾಗಬಹುದು. ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಸರ್ಕಾರ ಕೊಟ್ಟಿರುವ ಅಂಕಿ ಸಂಖ್ಯೆಗಳ ಪ್ರಕಾರವೆ ಕರ್ನಾಟಕದಲ್ಲಿ ಸಾವಿನ ಸಂಖ್ಯೆ ರಾಷ್ಟ್ರದ ಸರಾಸರಿಯ ದುಪ್ಪಟ್ಟಾಗಿದೆ. ದೇಶದಲ್ಲಿ ಮೃತರ ಸಂಖ್ಯೆ ದಶಲಕ್ಷಕ್ಕೆ 42 ಇದ್ದರೆ, ( ) ಕರ್ನಾಟಕದಲ್ಲಿ ದಶಲಕ್ಷಕ್ಕೆ 83 ತಲುಪಿದೆ. ಸರಕಾರ ಸರಿಯಾದ ಅಂಕಿ-ಅಂಶ ಪ್ರಾಮಾಣಿಕವಾಗಿ ಜನತೆ ಜೊತೆಗೆ ಹಂಚಿಕೆ ಮಾಡಿಕೊಳ್ಳಲಿಲ್ಲ. ಸಾವಿನ ಸಂಖ್ಯೆ ಈ ಪ್ರಮಾಣದ ಹೆಚ್ಚಳ ಕುರಿತ ತ್ವರಿತ ಅಧ್ಯಯನದ ವರದಿ ಪಡೆಯಲು ( ) ಕ್ರಮವಿಡಬೇಕು. ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಆಘಾತಕಾರಿ ಅಂಶ ಹಾಗೂ ಗಾಬರಿಗೊಳಿಸುವ ಸ್ಥಿತಿ. ಈ ಬಗ್ಗೆ ಚರ್ಚಿಸಿ, ತಿಳಿದು ವಾಸ್ತವಾಂಶವನ್ನು ಅರ್ಥೈಸಿ ಸರ್ಕಾರ ಗಂಭೀರ ಹೆಜ್ಜೆಗಳನ್ನು ಇರಿಸಬೇಕಾಗುವುದು. ಅಂಕಿ-ಅಂಶ ಬಚ್ಚಿಡುವುದಾಗಲಿ, ಜನರಿಗೆ ತಪ್ಪು ಮಾಹಿತಿ ವಿತರಿಸುವುದಾಗಲಿ ಯಾವುದೇ ಪ್ರಯೋಜನವಿಲ್ಲ. ಸತ್ಯ ಎಲ್ಲರಿಗೂ ತಿಳಿದಿರಲಿ. ಸರ್ಕಾರ ಗಂಭೀರ ಹೆಜ್ಜೆಗಳನ್ನು ಇಡಲೇಬೇಕಾದ ಸ್ಥಿತಿಗೆ ತಲುಪಿದ್ದೇವೆ. ಇಂಥ ಭಾರೀ ಸಾವಿನ ಹೆಚ್ಚಳದಿಂದ ಉದ್ಬವಿಸಿರುವ ಗಂಭೀರ ಸನ್ನಿವೇಶದಲ್ಲಿ ವಿರೋಧ ಪಕ್ಷಗಳನ್ನು, ತಜ್ಞರನ್ನು, ವೈದ್ಯರನ್ನು ತುರ್ತು ಸಭೆ ಕರೆದು ಚರ್ಚಿಸಿ ತಕ್ಷಣದ ಕ್ರಮ ಕೈಗೊಳ್ಳಲು ಸತ್ಯವಾದ ಅಂಕಿ-ಅಂಶ ಹಾಗೂ ವಸ್ತುಸ್ಥಿತಿ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಹೆಚ್.ಕೆ ಪಾಟೀಲ್ ಒತ್ತಾಯಿಸಿದ್ದಾರೆ. : - – - – - -