ಪೀರನವಾಡಿಯಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ಬೆಂಗಳೂರ, ಆಗಸ್ಟ್,28, 2020(..); ಬೆಳಗಾವಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಗಲಾಟೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡದಂತೆ ಶಾಂತಿ ಕಾಪಾಡಿ ಎಂದು ಸಿಎಂ ಯಡಿಯೂರಪ್ಪ ಡಿಸಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿ ಗಲಭೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಶಾಂತಿ ಕಾಪಾಡುವಂತೆ ಸೂಚನೆ ನಿಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಬೆಳಗಾವಿಗೆ ತೆರಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಗಲಭೆ ಸಂಬಂಧಿಸಿದಂತೆ ಶಿಸ್ತುಕ್ರಮಕ್ಕೆ ಮುಂದಾಗಿದ್ದಾರೆ. ; ..----