ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರ: 15 ದಿನಗಳ ಬಳಿಕ ಸುರಕ್ಷತೆ ಬಗ್ಗೆ ತಿಳಿಯಲಿದೆ – ಮಾಜಿ ಸಿಎಂ ಸಿದ್ಧರಾಮಯ್ಯ.. ಬೆಂಗಳೂರು,ಜು,4,2020(..): ಸರ್ಕಾರ ಆತ್ಮ ವಿಶ್ವಾಸದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾಡಿದೆ. ಆದರೆ 15 ದಿನಗಳ ಬಳಿಕ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ತಿಳಿಯಲಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಸರ್ಕಾರ ಆತ್ಮವಿಶ್ವಾಸದಿಂದ ಸುರಕ್ಷತಾ ಕ್ರಮ ಕೈಗೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿದೆ. 15 ದಿನಗಳ ಬಳಿಕ ಸುರಕ್ಷತೆ ಬಗ್ಗೆ ತಿಳಿಯಲಿದೆ. ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ ಎಂದು ಬಯಸುತ್ತೇನೆ ಎಂದು ಹೇಳಿದ್ದಾರೆ. : - - -15 - -