ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಮಾಜಿ ಸಚಿವ ಮುರುಗೇಶ್ ನಿರಾಣಿ.. ಮೈಸೂರು,ಜು,1,2020(..): ಮಾಜಿ ಸಚಿವ ಮುರುಗೇಶ್ ನಿರಾಣಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಗಸ್ಟ್ 1ರಿಂದ ಪಿಎಸ್ಎಸ್ಕೆ ಕಾರ್ಖಾನೆ ಆರಂಭವಾಗಲಿದ್ದು ಕಾರ್ಖಾನೆ ಆರಂಭಕ್ಕೆ ಯಾವುದೇ ವಿಘ್ನ ಬರದಿರಲೆಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಾಯಿ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಇಂದು ಭೇಟಿ ನೀಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದರು. ಮುರುಗೇಶ್ ನಿರಾಣಿಗೆ ಬೆಂಬಲಿಗರು ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದರು. : - - -- .