ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ… ಬೆಂಗಳೂರು,ಜೂ,12,2020(..): ಕೊರೋನಾ ಅಟ್ಟಹಾಸ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಮಾಡಿದ ಹಿನ್ನೆಲೆ ಸಂಕಷ್ಟದಲ್ಲಿದ್ದ ಗುತ್ತಿಗೆ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಲಾಕ್ ಡೌನ್ ಅವಧಿಯಲ್ಲಿನ ಸಂಪೂರ್ಣ ವೇತನವನ್ನ ನೌಕರರಿಗೆ ಭರಿಸುವಂತೆ ಆದೇಶ ಹೊರಡಿಸಿದೆ ಹೊರಡಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಕೆಲಸಕ್ಕೆ ಗೈರಾದ್ರೂ ಸರ್ಕಾರಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಕಟ್ ಮಾಡದಂತೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಗುತ್ತಿಗೆ ನೌಕರರಿಗೆ ಸಿಹಿಸುದ್ದಿ ಸಿಕ್ಕಿದೆ. ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಯಾವುದೇ ಬಸ್, ವಿಮಾನ , ರೈಲು, ಆಟೋ ಟ್ಯಾಕ್ಸಿ ಸಂಚಾರ ಬಂದ್ ಆಗಿತ್ತು. : – –-