ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಕೂಡಲೇ ವೇತನ ಬಿಡುಗಡೆ ಮಾಡಿ-ಸರ್ಕಾರಕ್ಕೆ ಆಗ್ರಹ… ದಾವಣಗೆರೆ,ಜೂ,5,2020(..): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೂಡಲೇ ವೇತನ ಬಿಡುಗಡೆ ಮಾಡಿ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ ಆಗ್ರಹಿಸಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ರಾಮಚಂದ್ರಪ್ಪ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮಾರ್ಚ್, ಏಪ್ರಿಲ್ ತಿಂಗಳಿಂದ ವೇತನ ಬಿಡುಗಡೆ ಮಾಡಿಲ್ಲ. ಜತೆಗೆ ಆಹಾರ ಕಿಟ್ ಸಹ ವಿತರಣೆ ಮಾಡಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕಿಯರಿಗೆ ವೇತನ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು. : –- – – - – .