ಲಾಕ್‍ಡೌನ್ ತೆರವಿನ ಬಳಿಕ ಮುಂದೇನು..? : ಚಿತ್ರರಂಗ, ಕ್ರೀಡಾಲೋಕದ ದಿಗ್ಗಜರ ಜತೆ ವಿಡಿಯೋ ಸಂವಾದ ನಡೆಸಿದ ಡಾ.ಸುಧಾಕರ್. ಬೆಂಗಳೂರು, ಮೇ 02, 2020 : ( . . ) ಲಾಕ್‍ಡೌನ್ ತೆರವಿನ ಬಳಿಕ ಎದುರಾಗುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಮಾರ್ಗೋಪಾಯಗಳ ಬಗ್ಗೆ ನಾನಾ ಕ್ಷೇತ್ರಗಳ ಗಣ್ಯರ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಮಾಲೋಚನೆ ಆರಂಭಿಸಿದ್ದಾರೆ. ಮೊದಲ ಹಂತದಲ್ಲಿ ಕನ್ನಡ ಚಿತ್ರರಂಗ ಹಾಗೂ ಕ್ರೀಡಾಲೋಕದ ದಿಗ್ಗಜರ ಜತೆ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕರೋನಾ ವೈರಾಣು ಜತೆಗೆ ಮುಂಬರುವ ದಿನಗಳಲ್ಲಿ ಬದುಕು ನಡೆಸುವ ಅನಿವಾರ್ಯತೆ ಎದುರಾಗಿರುವ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಯಿತು. ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ರವಿಚಂದ್ರನ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಚಿತ್ರನಟಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಸಂಗೀತ ನಿರ್ದೇಶಕರಾದ ಗುರುಕಿರಣ್, ಅರ್ಜುನ್ ಜನ್ಯ, ವಾಸುಕಿ ವೈಭವ್, ಚಿತ್ರನಟರಾದ ಪುನಿತ್ ರಾಜ್‍ಕುಮಾರ್, ಉಪೇಂದ್ರ, ರವಿಶಂಕರ್, ನೆನಪಿರಲಿ ಪ್ರೇಮ್, ಅಭಿಷೇಕ್ ಅಂಬರೀಷ್, ಚಿತ್ರನಟಿಯರಾದ ತಾರಾವೇಣು, ಶ್ರುತಿ, ರಾಗಿಣಿ ದ್ವಿವೇದಿ, ಖ್ಯಾತ ಕ್ರಿಕೆಟಿಗ ಅನಿಲ್‍ಕುಂಬ್ಳೆ, ಬಿಲಿಯಡ್ರ್ಸ್ ಪಟು ಪಂಕಜ್ ಅಡ್ವಾಣಿ ಅವರ ಜತೆ ಚರ್ಚಿಸಿ ಅವರಿಂದ ಸಲಹೆಗಳನ್ನು ಪಡೆದುಕೊಂಡರು.ಬಳಿಕ ನಟರಾದ ದರ್ಶನ್, ಯಶ್, ಸುದೀಪ್ ಸೇರಿದಂತೆ ಚಿತ್ರರಂಗದ ಸಂಘಟನೆಗಳ ಪ್ರಮುಖರ ಜತೆಗೂ ಸಮಾಲೋಚಿಸಲಿದ್ದು ಅವರಿಂದ ಸಲಹೆ ಪಡೆಯುವರು. ಎರಡು ತಾಸುಗಳ ಕಾಲ ನಡೆದ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದ ಚಿತ್ರರಂಗ ಮತ್ತು ಕ್ರೀಡಾಲೋಕದ ಗಣ್ಯರು ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಮುಂದೆಯೂ ಇದೇ ರೀತಿಯ ಕ್ರಮಗಳ ಮೂಲಕ ರಾಜ್ಯದ ಜನತೆಯ ಸುರಕ್ಷತೆ ಮತ್ತು ದೈನಂದಿನ ಚಟುವಟಿಕೆಗಳಿಗೆ ತೊದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಕೋವಿಡ್ – 19 ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಕೈಗೊಳ್ಳುವ ಯಾವುದೇ ಕಾರ್ಯದಲ್ಲಿ ಸಕ್ರೀಯರಾಗಿ ತೊಡಗಿಸಿಕೊಳ್ಳುವುದಾಗಿ ಭರವಸೆ ನೀಡಿದರು.ಕರೋನಾ ಸೋಂಕಿತ ಮಾಧ್ಯಮ ಪ್ರತಿನಿಧಿಯ ಸಂಪರ್ಕದ ಹಿನ್ನಲೆಯಲ್ಲಿ ಸ್ವಯಂ ದಿಗ್ಭಂಧನ ವಿಧಿಸಿಕೊಂಡು ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿರುವ ಡಾ.ಸುಧಾಕರ್, ಮುಂದಿನ ಹಂತದಲ್ಲಿ ಸಾಮಾಜಿಕ ಹೋರಾಟಗಾರರು, ಸಾಹಿತಿಗಳು, ಕಲಾವಿದರು ಮತ್ತು ಇತರೆ ಪ್ರಮುಖರೊಂದಿಗೆ ಈ ಸಮಾಲೋಚನೆ ಕಾರ್ಯವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. : – - - - - - -19 -19 & -19 , 02: , -19 . . , , , , , , , , , , , , , , , , , -19. ’ -19. , , . , . ’ . , , , .