ಹೆಣ್ಣಾನೆ ‘ ಚಾಮುಂಡಿ’ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು, ಏ.22, 2020 :(.. ) ಮೈಸೂರು ಮೃಗಾಲಯದಲ್ಲಿನ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರೂಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕ ರಾಮದಾಸ್ ಜತೆಗೆ ಭೇಟಿ ನೀಡಿ ಬುಧವಾರ ಪರಿಶೀಲಿಸಿದರು.ಇದೇ ವೇಳೆ, 16 ಹುಲಿಗಳಿಗೆ ಮಾಂಸಾಹಾರ ನೀಡಲು ಒಂದು ದಿನ ವೆಚ್ಚವಾದ 25 ಸಾವಿರ ರೂಪಾಯಿಯನ್ನು ವೈಯಕ್ತಿಕವಾಗಿ ನೀಡಿದರು. ಪ್ರಾಣಿ-ಪಕ್ಷಿಗಳಿಗೆ ಕೊರೋನಾ ಹಿನ್ನೆಲೆಯಲ್ಲಿ ಕೈಗೊಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಆಹಾರ ಕುಡಿಯುವ ನೀರು ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. : ------- : . . ( ). . 1.75 .