ಖಾಸಗಿ ಸಂಸ್ಥೆ ವರದಿಗೆ ಮಾನ್ಯತೆ ಇಲ್ಲ : ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ ಶಿರಸಿ ಮಾ 6, ೨೦೨೪ : ಖಾಸಗಿ ಸಂಸ್ಥೆಗಳ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿ, ಖಾಸಗಿ ಸಂಸ್ಥೆಯೊಂದರ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಖಾಸಗಿ ಸಂಸ್ಥೆ ನೀಡುವ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು. ನೀರಿನ ಸಮಸ್ಯೆಗೆ ಅಧ್ಯತೆ : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. : ̲ ̲ ̲ ̲ ̲ ̲