ಕನ್ನಡ ರಾಜ್ಯೋತ್ಸವಕ್ಕೆ ‘ಆಯುಷ್ಮಾನ್ ಭವ’ ರಿಲೀಸ್…. ಬೆಂಗಳೂರು,ಅ,14,(..) ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಆಯುಷ್ಮಾನ್ ಭವ’ ಕನ್ನಡ ರಾಜ್ಯೋತ್ಸವ ದಿನದಂದು ತೆರೆಗೆ ಅಪ್ಪಳಿಸಲಿದೆ. ಆಯುಷ್ಮಾನ್ ಭವ ಚಿತ್ರದಲ್ಲಿ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಹಿರಿಯ ನಟ ಅನಂತ್ ನಾಗ್ ಕೂಡಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ದ್ವಾರಕೀಶ್ ನಿರ್ಮಾಣ ಸಂಸ್ಥೆಯ ಸಿನಿಮಾ ಇದಾಗಿದೆ. ಪಿ ವಾಸು ನಿರ್ದೇಶನದ ಈ ಸಿನಿಮಾ ನವಂಬರ್ 1 ರಂದು ಬಿಡುಗಡೆಯಾಗಲಿದ್ದು, ಇಂದು ಮಧ್ಯಾಹ್ನ ಯೂ ಟ್ಯೂಬ್ ನಲ್ಲಿ ಟೀಸರ್ ಬಿಡುಗಡೆಯಾಗುತ್ತಿದೆ. - - - ೧