ಇಂದು ಮಂಡ್ಯಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ… ಮಂಡ್ಯ,ಆ,11,2019(..): ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಇಂದು ಮಂಡ್ಯಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ. ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಸಂಸದೆ ಸುಮಲತಾ ಅಂಭರೀಶ್ ಇಂದು ಮಂಡ್ಯಗೆ ಆಗಮಿಸಲಿದ್ದಾರೆ. ಮಂಡ್ಯದ ಚಾಮುಂಡೇಶ್ವರಿ ನಗರಕ್ಕೆ ಆಗಮಿಸಲಿರುವ ಸುಮಲತಾ ಅಂಬರೀಶ್ ಅವರು ಬೆಳಿಗ್ಗೆ 11 ಗಂಟೆಯಿಂದ 1.30ರವರೆಗೆ ಸಾರ್ವಜನಿಕರ ಸಮಸ್ಯೆಯನ್ನ ಆಲಿಸಲಿದ್ದಾರೆ ಎನ್ನಲಾಗುತ್ತಿದೆ. : - - - - .