ಶಿವಮೊಗ್ಗದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು… ಶಿವಮೊಗ್ಗ,ಆ,9,2019(..): ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಾಗರ ತಾಲೂಕಿನ ಮುರುಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ ತಿಮ್ಮಪ್ಪ ನಾಯ್ಕ್ (65) ಮೃತ ರೈತ. ತಿಮ್ಮಪ್ಪ ಜಮೀನಿಗೆ ತೆರಳಿದ್ದ ವೇಳೆ ಕೃಷಿಹೊಂಡಕ್ಕೆ ಬಿದ್ದು ಮೃತಪಟ್ಟಿರದ್ದಾರೆ ಎನ್ನಲಾಗಿದೆ. ಈ ಕುರಿತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - – - -