ಕೇಸರಿ ಇವರೊಬ್ಬರ ಆಸ್ತಿಯಾ..? ಬಿಜೆಪಿಗೆ ಕುಟುಕಿದ ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು,ಫೆಬ್ರವರಿ,12,2024(..):ಕರ್ನಾಟಕ ಬಜೆಟ್​ ಅಧಿವೇಶನ ಇಂದಿನಿಂದ ಆರಂಭವಾಗಿದ್ದುಇಂದು ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಹಾಜರಾಗಿ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಕೇಸರಿ ಇವರೊಬ್ಬರ ಆಸ್ತಿಯಾ..? ಎಂದು ಪ್ರಶ್ನಿಸಿದರು. . ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಬಿಜೆಪಿಯವರು ಕೇಸರಿ ಶಾಲಾದರೂ ಹಾಕಿಕೊಳ್ಳಲಿ ಕಪ್ಪಾದರೂ ಹಾಕಿಕೊಳ್ಳಲಿ. ಕೇಸರಿ ಇವರೊಬ್ಬರ ಆಸ್ತಿಯಾ ಎಂದು ಪ್ರಶ್ನಿಸಿದರು. ಕೇಸರಿ ಇವರೊಬ್ಬರ ಆಸ್ತಿಯಾ..? ಎಂದು ಪ್ರಶ್ನಿಸಿದರು. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿಯವರು ಕೇಸರಿ ಶಾಲಾದರೂ ಹಾಕಿಕೊಳ್ಳಲಿ ಕಪ್ಪಾದರೂ ಹಾಕಿಕೊಳ್ಳಲಿ. ಕೇಸರಿ ಇವರೊಬ್ಬರ ಆಸ್ತಿಯಾ ಎಂದರು. ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಾವು ರಾಜ್ಯದ ಹಿತಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ. ನಮ್ಮ ಗ್ಯಾರಂಟಿಗಳನ್ನೇ ಬಿಜೆಪಿಯವರು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿ ಕಾಪಿ ಮಾಡಿಯೇ ಮೋದಿ ಗ್ಯಾರಂಟಿ ಅಂತ ಮಾಡುತ್ತಿಲ್ಲವೇ? ಕರ್ನಾಟಕ ಮಾಡೆಲ್ ಅನ್ನೇ ನಾವು ಜಾರಿ ಮಾಡುತ್ತೇವೆ ಎಂದು ತಿಳಿಸಿದರು. : – -- -