ಗಾಂಜಾ ಮಾರಾಟ ಅವ್ಯಾಹತ : ಸರಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ಕೈ ಶಾಸಕ. ಬೆಂಗಳೂರು, ಜ.೧೬, ೨೦೨೪ : ( ̤ ̤ ) : ರಾಜ್ಯದ ಶಿಕ್ಷಣ ಸಂಸ್ಥೆಗಳ ಸಮೀಪವೇ ಗಾಂಜಾ ಮಾರಾಟ ಮತ್ತು ಸೇವನೆ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಬಗ್ಗೆ ನನಗೆ ನೋವಿದೆ, ವಿಷಾದವಿದೆ ಎಂದು ಕಾಂಗ್ರೆಸ್‌ ಶಾಸಕರೇ ಅಸಮಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಶಾಸಕ ದಿನೇಶ್‌ ಗೂಳಿಗೌಡ, ಸರಕಾರದ ವೈಫಲ್ಯದಬಗ್ಗೆ ತೀವ್ರ ಅಸಮಧಾನಗೊಂಡಿದ್ದಾರೆ. ಶಾಸಕ ದಿನೇಶ್‌ ಗೂಳಿಗೌಡ ಅವರ ಪತ್ರದ ಸಂಪೂರ್ಣ ಸಾರಾಂಶ ಹೀಗಿದೆ.. “ಮಕ್ಕಳು ದೇವರ ರಾಜ್ಯದ ಪ್ರಜೆಗಳು”. ರಾಷ್ಟ್ರಕವಿ ಕುವೆಂಪು ಅವರ ಈ ಮಾತು ಅಕ್ಷರಶಃ ಸತ್ಯ. ಆದರೆ, ಈ ನಾಡಿನಲ್ಲಿ ನಿಜಕ್ಕೂ ಏನಾಗುತ್ತಿದೆ? ಮಕ್ಕಳು ನೀತಿವಂತರಾಗಿ, ಸುಸಂಸ್ಕೃತರಾಗಿ, ದುಶ್ಚಟಗಳಿಲ್ಲದೇ ಕಲಿಕೆ ಮಾಡುತ್ತಿದ್ದಾರೆಯೇ? ಅಂಥದ್ದೊಂದು ಸುಂದರ ಜೀವನ ಅವರದ್ದಾಗಿದೆಯೇ? ಎಂಬ ಪ್ರಶ್ನೆಯನ್ನು ಕೇಳಿಕೊಂಡಾಗ, ಸಿಗುವ ಉತ್ತರ “ಇಲ್ಲ”. ನಾನಿಂದು ಅತ್ಯಂತ ವಿಷಾದ ಹಾಗೂ ನೋವಿನಿಂದ ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಅದೂ ನೊಂದ ಮಕ್ಕಳ ಹಾಗೂ ಅವರ ಪೋಷಕರ ಪರವಾಗಿ ಸರ್ಕಾರದ ಗಮನಕ್ಕೆ ತರಲು ಬಯಸುತ್ತಿದ್ದೇನೆ. ಮಾದಕ ವ್ಯಸನಗಳಿಗೆ ಇಂದು ಅನೇಕ ಮಕ್ಕಳು ಬಲಿಯಾಗುತ್ತಿದ್ದಾರೆ. ಬದುಕನ್ನು ಕಟ್ಟಿಕೊಳ್ಳಬೇಕಾದ ಈ ಸಮಯದಲ್ಲಿ ಗಾಂಜಾಗಳ ದಾಸರಾಗುತ್ತಿದ್ದಾರೆ. ಇದನ್ನು ನಾವೀಗ ತಪ್ಪಿಸಬೇಕಿದೆ. ಮಕ್ಕಳಿಗೆ ಸುಸ್ಥಿರ ಬದುಕನ್ನು ಕಟ್ಟಿಕೊಡುವ ಮೂಲಕ ಬಲಿಷ್ಠ ಹಾಗೂ ಬಲಾಢ್ಯ ಕಾನೊನು ರೂಪಿಸಬೇಕಿದೆ. ಹಾಗಂತ ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ಹಲವು ದಶಕಗಳಿಂದ ಬೆನ್ನು ಹತ್ತಿರುವ ಪೆಡಂಭೂತವಾಗಿದೆ. ಈ ಮಧ್ಯೆ ಅನೇಕ ಸರ್ಕಾರಗಳು ಆಳಿ ಹೋಗಿವೆ. ಅದೆಷ್ಟೋ ದಕ್ಷ ಅಧಿಕಾರಿಗಳ ಅವಧಿಗಳು ಮುಗಿದು ಹೋಗಿವೆ. ಆದರೆ, ಇದುವರೆಗೂ ಇಂಥ ಸಮಸ್ಯೆಯನ್ನು ಬೇರು ಸಮೇತ ಕಿತ್ತೊಗೆಯಲು ಸಾಧ್ಯವೇ ಆಗಿಲ್ಲ. ‌ಮಾದಕ ವ್ಯಸನಗಳಿಗೆ, ಗಾಂಜಾ ವಹಿವಾಟಿಗೆ ಪದೇ ಪದೆ ಮಕ್ಕಳು ಟಾರ್ಗೆಟ್ ಆಗುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿವೆ. ಅನೇಕ ಪಾಲಕರ ಅಳಲು ಹೀಗಾಗಿ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುವುದು ಈಗಿನ ತುರ್ತು ಕ್ರಮಗಳಲ್ಲಿ ಒಂದು ಎಂಬುದು ನನ್ನ ಭಾವನೆಯಾಗಿದೆ. ಏಕೆಂದರೆ ಗಾಂಜಾ ಹಾವಳಿ ದೊಡ್ಡ ಪಿಡುಗಿನಂತೆ ವ್ಯಾಪಿಸಿದೆ. ಇದರ ಸುಳಿಗೆ ಯುವಜನತೆ ದೊಡ್ಡ ಸಂಖ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಶೈಕ್ಷಣಿಕ ಬದುಕು ಮೂರಾಬಟ್ಟೆಯಾಗಿದೆ. ಗಾಂಜಾ ಖರೀದಿಗೆ ಹಣವಿಲ್ಲದೆ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳ್ಳತನ, ಸುಲಿಗೆಗಳಿಗೆ ಕೆಲವರು ಇಳಿದಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇದು ಪೋಷಕರನ್ನು ಕಂಗೆಡಿಸಿದೆ. ಈ ಸಕ್ರಿಯ ಜಾಲಕ್ಕೆ ಕೊನೆ ಹಾಡಲೇಬೇಕಿದೆ. ಇದನ್ನು ಕೂಲಂಕಷವಾಗಿ ನೋಡುತ್ತಾ ಹೋದರೆ ಪೊಲೀಸರಿಗೆ ಮಾಹಿತಿ ಇದ್ದರೂ ಏಕೆ ಸುಮ್ಮನಿದ್ದಾರೆ ಎಂಬ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಹಾಗಾಗದೇ ಗಾಂಜಾ ಮಾರಾಟ ಹಾಗೂ ಸೇವನೆ ಜಾಲವನ್ನು ಬೇರು ಸಮೇತ ಕಿತ್ತೊಗೆಯಲು ತಾವು ಮುಂದಾಗಬೇಕು. ಇದಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನಡಿ ಕ್ರಮವನ್ನು ಜರುಗಿಸಬೇಕು. ಸರ್ಕಾರ ತಗೆದುಕೊಳ್ಳಬಹುದಾದ ಕ್ರಮಗಳು . ಜನರು ಮುಕ್ತವಾಗಿ ಮಾಹಿತಿ ನೀಡುವಂತಾಗಲು ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಮನವರಿಕೆ ಮಾಡುವುದು ಕೂಡಲೇ ನಮ್ಮ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಲು ಮನವಿ : _ Karnataka_ _ mla_ _ chiefminister_congress