ಡಿ.26 ರಂದು ಯುವನಿಧಿ ಯೋಜನೆ ನೋಂದಣಿಗೆ ಚಾಲನೆ- ಸಚಿವ ಶರಣಪ್ರಕಾಶ್ ಪಾಟೀಲ್. ಬೆಂಗಳೂರು, ಡಿಸೆಂಬರ್ 21,2023(..):ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಡಿಸೆಂಬರ್ 26ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಡಿಸೆಂಬರ್ 26 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಲೋಗೋ ಅನಾವರಣ ಮಾಡಲಿದ್ದಾರೆ. ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದರು. ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳು ಆಗಿದ್ದರೆ ಅವರು ಈ ಯುವನಿಧಿಗೆ ಅರ್ಹರಾಗಿರುತ್ತಾರೆ. ಪದವಿ ಪಾಸ್ ಆದವರೆಗೆ 3 ಸಾವಿರ ರೂ., ಡಿಪ್ಲೋಮಾ ಪಾಸ್ ಆದವರಿಗೆ 1500 ಸಾವಿರ ರೂ. ನೀಡುತ್ತೇವೆ ಎಂದು ಮಾಹಿತಿ ನೀಡಿದರು. : 26- - –- - .