ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ. ಬೆಂಗಳೂರು,ಅಕ್ಟೋಬರ್,21,2023(..):ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಸಿದ‍್ಧರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ‍್ಧರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು. : -- – - - .