ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಸಭೆ: ಸಚಿವರಾದ ಕೆ.ಎಚ್ ಮುನಿಯಪ್ಪ, ಶಿವಾನಂದ ಪಾಟೀಲ್ ಭಾಗಿ. ಬೆಂಗಳೂರು, ಅಕ್ಟೋಬರ್,19.2023(..):ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ನಡೆಯುವ ಸಮಸ್ಯೆಗಳ ಬಗ್ಗೆ ಹಾಗೂ ತೂಕದಲ್ಲಿ ನಿಖರತೆಯನ್ನು ಕಾಯ್ದುಕೊಳ್ಳುವ ಕುರಿತು ಇಂದು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್ ನೇತೃತ್ವದಲ್ಲಿ ಇಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪನವರು ಇಂದು ಸಭೆಯನ್ನು ನಡೆಸಿದರು.ರಾ ಸಭೆಯಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಹಾಗೂ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿಯಂತ್ರಕರಾದ ಅನಿತಾ ಲಕ್ಷ್ಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. : - - - – .