ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳ ನಿಯಂತ್ರಣಕ್ಕೆ ಸರ್ಕಾರದಿಂದ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ. ಬೆಂಗಳೂರು, ಸೆಪ್ಟಂಬರ್,14,2023(..):ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳುಸುದ್ದಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಚಾರಗಳು ಸತ್ಯ ಅಥವಾ ಸುಳ್ಳು ಎಂಬುದಷ್ಟೇ ನಾವು ಹೇಳಲು ಹೊರಟಿದ್ದೇವೆ. ಯಾವುದೇ ಹೊಸ ಕಾನೂನು, ಅಥವಾ ಮಸೂದೆ ತರಲು ಮುಂದಾಗಿಲ್ಲ ಎಂದು ತಿಳಿಸಿದರು. ಇರುವ ಕಾನೂನಿನಲ್ಲಿ ಸತ್ಯ ಅಥವಾ ಸುಳ್ಳು ಎಂಬುದನ್ನು ನಾವು ತಿಳಿಸಲು ಹೊರಟಿದ್ದೇವೆ ಅಷ್ಟೇ ಎಂದರು. : – – - – - - .