ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ವಿಚಾರ: ಮಾಜಿ ಸಿಎಂ ಹೆಚ್.ಡಿಕೆ ಪ್ರತಿಕ್ರಿಯೆ ಏನು ಗೊತ್ತೆ..? ಬೆಂಗಳೂರು,ಸೆಪ್ಟಂಬರ್,9,2023(..):ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಿನ್ನೆಯಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ. ತಂದೆಯವರ ಆರೋಗ್ಯ ವೃದ್ಧಿ ಗಾಗಿ ಪೂಜೆ ಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿ ಇತ್ತಿಚೇಗಿನ ನಡೆದ ಬೆಳವಣಿಗೆ,ಆರೋಗ್ಯ ವೃದ್ದಿಗೆ ಪೂಜೆ ಮಾಡಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಧಾರ್ಮಿಕ ಪೂಜೆ ನೆರವೇರಿಸಿದ್ದೇನೆ ಎಂದಿದ್ದಾರೆ. : –- – - -