ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಗರಂ. ಬೆಂಗಳೂರು, ಜೂನ್ 13,2023(..):ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇಂದು ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ, ಹಣ ಇದ್ದರೂ ಸಮರ್ಪಕ ಬಳಕೆ ಯಾಕಿಲ್ಲ? ನಮ್ಮ ಜನ ಸರ್ಕಾರಿ ಆಸ್ಪತ್ರೆಗಳಿಗೆ ಬರಬೇಕೋ ಬೇಡ್ವೋ? ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು. ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಿರಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಆರೋಗ್ಯ ಮಿಷನ್ ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದರು. ಬಳಿಕ, ರಾಷ್ಟ್ರೀಯ ಆರೋಗ್ಯ ಮಿಷನ್‌ ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈದ್ಯರ ಕೊರತೆ ಇದೆ, ಶೇ. 31 ರಷ್ಟು ಎಂಬಿಬಿಎಸ್‌ ವೈದ್ಯರ ಕೊರತೆ ಹಾಗೂ ಶೆ. 18 ರಷ್ಟು ನರ್ಸ್‌ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದ ಸಿಎಂ ಸಿದ್ಧರಾಮಯ್ಯ, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು ಎಂದು ಸಿಎಂ ಸಿದ್ಧರಾಮಯ್ಯ ಇಲಾಖೆಯ ಆಯುಕ್ತರಿಗೆ ಸೂಚಿಸಿದರು. ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು. ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಸೂಚಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಸಿಎಂ ಸಿದ‍್ಧರಾಮಯ್ಯ, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು. ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರೆದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲ್ಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕ್ಷಮತೆ ಬಳಿಕ ಸಿಎಂ ಕೊಟ್ಟ ಸೂಚನೆಗಳು ಹೀಗಿವೆ 2.ಪ್ರಗತಿ ಪರಿಶೀಲನೆ ಮಾಡಿ, ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದರು. 4.ಲ್ಯಾಬ್‌ ಟೆಕ್ನಿಷಿಯನ್‌ ಮತ್ತಿತರ ಅತಿ ಅಗತ್ಯವಿರುವ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಆದ್ಯತೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚಿಸಿದರು. 5.ಔಷಧ ಖರೀದಿ ಪ್ರಕ್ರಿಯೆ ನಿರಂತರವಾಗಿ ನಡೆಯಲು ಅನುವಾಗುವಂತೆ ಎರಡು ವರ್ಷಕ್ಕೊಮ್ಮೆ ಟೆಂಡರ್‌ ಕರೆಯಲು ಇಲಾಖೆಯು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. : – - - … - – , 13: / . . . , . . . , 52 % , 31% 18 % . . . . , 2 . , . . , . . . , . . . 1. - . . 2. . 3. . 14 . , , . 4. . 5. . , , . , .. , .. , ’ . .