ವಕೀಲರ ರಕ್ಷಣಾ ಕಾಯ್ದೆ ಜಾರಿ: ರಾಜಸ್ಥಾನದ ಕಾಯ್ದೆ ಅಧ್ಯಯನ- ಸಿಎಂ ಸಿದ್ದರಾಮಯ್ಯ ಬೆಂಗಳೂರು, ಜೂನ್,3,2023(..):ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು. ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಿದರು. ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೆಯೇ ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನ ಭೇಟಿಯಾದರು. ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ ಕಷ್ಟಕರವಾಗಿದ್ದು, ಜ್ಞಾನಭಾಗ್ಯವನ್ನು ನೀಡಬೇಕೆಂದು ನಿಯೋಗ ಕೋರಿತು. ಬಿಬಿಎಂಪಿ ವತಿಯಿಂದ 600 ಕೋಟಿ ರೂ.ಗಳು ಸೆಸ್ ಬಾಕಿ ಇದೆ. ಗ್ರಂಥಾಲಯಗಳ ಶೇ 6 ರಷ್ಟು ಸೆಸ್ ಮೊತ್ತವನ್ನು ಸಂಗ್ರಹ ಮಾಡುತ್ತಿದ್ದು, ಅದನ್ನು ಗ್ರಂಥಾಲಯ ಲೆಕ್ಕಶೀರ್ಷಿಕೆಗೆ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು. ಈ ವೇಳೆ ಮಾತನಾಡಿದ ಸಿದ್ಧರಾಮಯ್ಯ, ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು ಎಂದು ತಿಳಿಸಿದರು. ನಿಯೋಗದಲ್ಲಿ ಸಪ್ನಾ ಬುಕ್ ಹೌಸ್, ನಿರಂತರ ಪ್ರಕಾಶನ, ಗೀತಾಂಜಲಿ ಪ್ರಕಾಶನ, ಸೇರಿದಂತೆ ಹಲವು ಪ್ರಕಾಶನ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು. : – - --