ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಮಸ್ಯೆ ಬಗೆಹರಿಸದ ಕುರಿತು ವರದಿ ಕೇಳಿದ ಮುಖ್ಯಮಂತ್ರಿಗಳು ಬೆಂಗಳೂರು, ಮೇ 31, 2023 (..):ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು. ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು. : * - *, 31- - . . .