ಗೆಲುವಿನ ಖಾತೆ ತೆರೆದ ಕಾಂಗ್ರೆಸ್: ಚಳ್ಳೇಕೆರೆ, ಕೂಡ್ಲಗಿಯಲ್ಲಿ ‘ಕೈ’ ಅಭ್ಯರ್ಥಿಗಳು ಗೆಲುವು. ಬೆಂಗಳೂರು,ಮೇ,13,2023(..):ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆಯತ್ತ ಸಾಗುತ್ತಿದೆ. ಈ ನಡುವೆ ಕಾಂಗ್ರೆಸ್ ಗೆಲುವಿನ ಖಾತೆ ತೆರೆದಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಟಿ.ರಘುಮೂರ್ತಿ, ಕೂಡ್ಲಗಿ ವಿಧಾಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಟಿ.ಶ್ರೀನಿವಾಸ್ ಜಯಭೇರಿ ಭಾರಿಸಿದ್ದಾರೆ. ಕೂಡ್ಲಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್ ಟಿ ಶ್ರೀನಿವಾಸ್ ಗೆ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದರೇ ಚಳ್ಳೇಕರೆ ಕ್ಷೇತ್ರದಲ್ಲಿ ಟಿ. ರಘುಮೂರ್ತಿ 16 127ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಸೋಲನುಭವಿಸಿದ್ದಾರೆ. : –--