ಬಜರಂಗದಳ ನಿಷೇಧ​​ ವಿಚಾರದಲ್ಲಿ ಕಾಂಗ್ರೆಸ್​ನಲ್ಲಿಯೇ ಗೊಂದಲ- ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹುಬ್ಬಳ್ಳಿ,ಮೇ,5,2023(..):ಭಜರಂಗದಳ ನಿಷೇಧದ ವಿಚಾರದಲ್ಲಿ ಕಾಂಗ್ರೆಸ್​ನಲ್ಲಿಯೇ ಗೊಂದಲವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು. ಈ ಕುರಿತು ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವೀರಪ್ಪ ಮೊಹ್ಲಿ ಅವರು ನಾವು ಬಜರಂಗದಳವನ್ನು ಬ್ಯಾನ್ ಮಾಡುವುದಿಲ್ಲ ಎಂದು ಹೇಳಿದರೇ ರಣದೀಪ್​ ಸಿಂಗ್​ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾವು ಭಜರಂಗದಳವನ್ನ ನಿಷೇಧ ಮಾಡಿಯೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ವಿಚಾರದಲ್ಲಿ ಅವರಲ್ಲಿಯೇ ಸ್ಪಷ್ಟತೆ ಇಲ್ಲ. ಬಜರಂಗದಳ ಭಯ ಎಷ್ಟ ಇದೆ ಎನ್ನುವುದನ್ನು ಕಾಂಗ್ರೆಸ್‌ ನವರು ನೋಡಿಕೊಳ್ಳಿ ಎಂದು ಕಿಡಿಕಾರಿದರು. ಬಜರಂಗದಳ ನಿಷೇಧ ಮಾಡುವುದರ ಬಗ್ಗೆ ಜಗದೀಶ್ ಶೆಟ್ಟರ್ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕೆಂದು ನಾನು ವಿನಂತಿ ಮಾಡುತ್ತೇನೆ ಎಂದು ಪ್ರಹ್ಲಾದ್​ ಜೋಶಿ ಆಗ್ರಹಿಸಿದರು. : – - - – -