ಸಿದ್ದರಾಮಯ್ಯ ಅಭಿವೃದ್ದಿ ಮಾಡಲ್ಲ ಓಡಿ ಹೋಗ್ತಾರೆ: ವಿ.ಸೋಮಣ್ಣರನ್ನ ಗೆಲ್ಲಿಸಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ. ಮೈಸೂರು,ಮೇ,2,2023(..): ಸಿದ್ಧರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ಸಿದ್ದರಾಮಯ್ಯ ಅಭಿವೃದ್ದಿ ಮಾಡಲ್ಲ ಓಡಿ ಹೋಗ್ತಾರೆ. ಹೀಗಾಗಿ ವಿ.ಸೋಮಣ್ಣರಿಗೆ ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ವರುಣಾ ಕ್ಷೇತ್ರದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಅಮಿತ್​ ಶಾ, ಕರ್ನಾಟಕವನ್ನು ಅಭಿವೃದ್ದಿ ಮತ್ತು ಸುರಕ್ಷಿತ ರಾಜ್ಯ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೇ ಪಿಎಫ್​ ಐ ನಿಷೇಧವನ್ನು ಹಿಂಪಡೆಯುತ್ತಾರೆ. ಕಾಂಗ್ರೆಸ್​ ರಾಜ್ಯವನ್ನು ಎಟಿಎಂ ಮಾಡಲು ಹೊರಟಿದೆ. ಸಿದ್ದರಾಮಯ್ಯ ಅವರು ಲಿಂಗಾಯತರಿಗೆ ಅಪಮಾನ ಮಾಡಿದ್ದಾರೆ. ಆದರೆ ಬಿಜೆಪಿ ಬಿಎಸ್​ ಯಡಿಯೂರಪ್ಪ ಮತ್ತು ಬಸವರಾಜ್​ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಿದೆ. ಸಿದ್ದರಾಮಯ್ಯ ಅವರು ಲಿಂಗಾಯತರು ಭಷ್ಟಾಚಾರಿಗಳು ಎನ್ನುವ ಮೂಲಕ ಲಿಂಗಾಯತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ಚಾಮುಂಡೇಶ್ವರಿ, ವರುಣ ಅ ಮೇಲೆ ಬಾದಾಮಿ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಒಂದೊಂದು ಕ್ಷೇತ್ರ ಬದಲಾವಣೆ ಮಾಡುತ್ತಾರೆ . ಸಿದ್ದರಾಮಯ್ಯ ಅವರೆ ನೀವು ಯಾಕೆ ಪದೇ ಪದೇ ಕ್ಷೇತ್ರ ಬದಲಾಯಿಸುತ್ತೀರಿ. ವರುಣಾ ಮತದಾರರೇ ನಿವೃತ್ತಿ ಹೊಂದುವ ನಾಯಕ ಬೇಕಾ ಅಥವಾ ಭವಿಷ್ಯದ ಬಗ್ಗೆ ಯೋಜಿಸುವ ನಾಯಕ ಬೇಕಾ. ಕಾಂಗ್ರೆಸ್​ ಮುಕ್ತ ಕರ್ನಾಟಕ ಮಾಡಿ. ವರುಣಾ ಜನರು ಸಿದ್ದರಾಮಯ್ಯಗೆ ಮತ ನೀಡಬೇಡಿ. ವಿ ಸೋಮಣ್ಣ ಅವರನ್ನು ಗೆಲ್ಲಿಸಿದರೇ, ವರುಣಾವನ್ನು ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ಹೀಗಾಗಿ ಸೋಮಣ್ಣ ಅವರನ್ನ ಶಾಸಕರಾಗಿ ಆಯ್ಕೆ ಮಾಡಬೇಕು . ಸೋಮಣ್ಣ ಅತಿ ಹೆಚ್ಚು ಮತಗಳಿಂದ ಗೆಲ್ಲಬೇಕು ಎಂದು ಹೇಳಿದರು. : - - - -