ಮಾ.21 ರಿಂದ ಕರೆ ನೀಡಿದ್ದ ‘ಸಾರಿಗೆ ನೌಕರ’ರ ಮುಷ್ಕರ ವಾಪಸ್ ಬೆಂಗಳೂರು, ಮಾರ್ಚ್ 19, 2023 (..):ಮಾ.21 ರಿಂದ ಕರೆ ನೀಡಲಾಗಿದ್ದ ‘ಸಾರಿಗೆ ನೌಕರ’ರ ಮುಷ್ಕರ ವಾಪಸ್ ಪಡೆಯಲಾಗಿದೆ. ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿದೆ. ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 21ರಿಂದ ಸಾರಿಗೆ ನೌಕರರು ಮುಷ್ಕರ ನಡೆಸೋದಕ್ಕೆ ಕರೆ ನೀಡಿದ್ದರು. ಆದರೀಗ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ. 8 ಟ್ರೇಡ್ ಯೂನಿಯನ್ ಗಳು 20 % ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. 15 % ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅಲ್ಲದೇ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಗೆ ನೀಡಿದೆ.