ಡಿ.ಕೆ ಶಿವಕುಮಾರ್ ವಿರುದ್ದಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಿಚಾರಣೆ ಮಾ.24ಕ್ಕೆ ಮುಂದೂಡಿದ ಕೋರ್ಟ್ ಬೆಂಗಳೂರು,ಮಾರ್ಚ್,17,2023(..):ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನ ಮಾರ್ಚ್ 24ಕ್ಕೆ ಮುಂದೂಡಿಕೆ ಮಾಡಿದೆ. ಸಿಬಿಐ ಪ್ರಕರಣ ರದ್ದು ಕೋರಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು ವಿಚಾರಣೆಯನ್ನ ಮಾರ್ಚ್ 24‍ಕ್ಕೆ ಮುಂದೂಡಿಕೆ ಮಾಡಿತು. ಹಾಗೆಯೇ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದ್ದು ಕಾಲಾವಕಾಶ ಕೊರತೆಯಿಂದಾಗಿ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅಲ್ಲದೆ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನ ವಿಸ್ತರಿಸಿತು. : – - - - - 24.