ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ: ಇಂದೇ ಆದೇಶ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಮಾರ್ಚ್,16,2023(..):ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಮತ್ತು ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಹೆಚ್ಚಳ ಮಾಡುತ್ತೇವೆ. ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು. : ------