ತಮಿಳುನಾಡಿನಲ್ಲಿ ಉಚಿತ ಸೀರೆ- ಪಂಚೆ ವಿತರಣೆ ವೇಳೆ ನೂಕುನುಗ್ಗಲು: ನಾಲ್ವರು ಮಹಿಳೆಯರ ಸಾವು ಬೆಂಗಳೂರು, ಫೆಬ್ರವರಿ 05, 2023 (..):ಉಚಿತವಾಗಿ ಸೀರೆ ಮತ್ತು ಪುರುಷರಿಗೆ ಪಂಚೆ ವಿತರಿಸುವ ಕಾರ್ಯಕ್ರಮದ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ತಮಿಳುನಾಡಿನ ಜನತೆ ಶ್ರದ್ಧಾ ಭಕ್ತಿಯಿಂದ ಆಚರಿಸುವ ತೈಪೂಸಂ ಹಿನ್ನಲೆಯಲ್ಲಿ ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿಯಲ್ಲಿ ಈ ಅವಘಡ ನಡೆದಿದೆ. ವ್ಯಕ್ತಿಯೊಬ್ಬರು ಬಡ ಮಹಿಳೆಯರಿಗೆ ಉಚಿತವಾಗಿ ಸೀರೆ ಮತ್ತು ಪುರುಷರಿಗೆ ಪಂಚೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ನಾಲ್ವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಉಚಿತ ಸೀರೆ ಮತ್ತು ಪಂಚೆ ವಿತರಿಸುವ ಸಲುವಾಗಿ ಟೋಕನ್ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಸ್ಥಳದಲ್ಲಿ ಪೊಲೀಸರು ಸಹ ಬಂದೋಬಸ್ತಿಗಾಗಿ ಬೀಡು ಬಿಟ್ಟಿದ್ದರು. ಆದರೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.