ಪದ್ಮ ಪ್ರಶಸ್ತಿ ಪುರಸ್ಕೃತರ ಮನೆಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ ಸಚಿವ ಅಶ್ವಥ್ ನಾರಾಯಣ್. ಮೈಸೂರು,ಜನವರಿ,28,2023(..): ಈ ಸಾಲಿನ ಪದ್ಮಭೂಷಣ ಪುರಸ್ಕೃತರಾದ ಹಿರಿಯ ಸಾಹಿತಿ ಎಸ್. ಎಲ್ ಭೈರಪ್ಪ ಮತ್ತು ಪದ್ಮಶ್ರೀ ಪುರಸ್ಕೃತರಾದ ಡಾ.ಖಾದರ್ ಮತ್ತು ಡಾ. ಸುಬ್ಬರಾಮನ್ ಅವರ ನಿವಾಸಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಭೇಟಿ ನೀಡಿ, ಅಭಿನಂದಿಸಿದರು. ಮೊದಲು ಭೈರಪ್ಪನವರ ಮನೆಗೆ ತೆರಳಿದ ಸಚಿವ ಅಶ್ವಥ್ ನಾರಾಯಣ್ ಅವರು, ಲೇಖಕರಿಗೆ ಶಾಲು ಹಾಕಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು,”ಭೈರಪ್ಪನವರ ಸಾಹಿತ್ಯ ಸಾಧನೆಯು ಅನುಪಮವಾಗಿದ್ದು, ಭಾರತೀಯ ಚಿಂತನೆಗಳನ್ನು ಉದ್ದೀಪಿಸುವಂತಿದೆ. ಅವರಿಗೆ ಪದ್ಮಭೂಷಣ ಪುರಸ್ಕಾರ ಕೊಟ್ಟಿರುವುದರಿಂದ ಪ್ರಶಸ್ತಿಗೆ ಮೌಲ್ಯ ಬಂದಿದೆ” ಎಂದರು. ಹಾಗೆಯೇ, ಸಿರಿಧಾನ್ಯಗಳನ್ನು ಜನಪ್ರಿಯಗೊಳಿಸುವ ಮೂಲಕ ಡಾ.ಖಾದರ್ ಮತ್ತು ತಾಳೆಗರಿಗಳ ಡಿಜಿಟಲ್ ಅಧ್ಯಯನಕ್ಕೆ ಕಾರಣಕರ್ತರಾಗಿರುವ ಡಾ.ಸುಬ್ಬರಾಮನ್ ಅವರ ಸಾಧನೆ ಅನುಕರಣೀಯವಾಗಿದೆ” ಎಂದು ಸಚಿವ ಅಶ್ವಥ್ ನಾರಾಯಣ್ ಬಣ್ಣಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. : - – -- … : , / . , . , . , , , . , . ’ - . .