ಮಂಡ್ಯದಲ್ಲಿ 7 ಕ್ಷೇತ್ರಗಳಲ್ಲೂ ಬಿಜೆಪಿ ವಿಜಯೋತ್ಸವ ಆಚರಿಸುತ್ತೆ- ಸಚಿವ ಗೋಪಾಲಯ್ಯ ವಿಶ್ವಾಸ. ಮಂಡ್ಯ,ಡಿಸೆಂಬರ್,16,2022(..):ಮಂಡ್ಯದ 7 ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದು ವಿಜಯೋತ್ಸವ ಆಚರಣೆ ಮಾಡುತ್ತದೆ ಎಂದು ಸಚಿವ ಗೋಪಾಲಯ್ಯ ಹೇಳಿದರು. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. 2.70 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಅನುಕೂಲ ದೊರೆತಿದೆ. ಮೈಶುಗರ್ ಕಾರ್ಖಾನೆಯನ್ನ ಸಿಎಂ ಬೊಮ್ಮಾಯಿ ಪುನಾರಂಭ ಮಾಡಿದ್ದಾರೆ ಅನುದಾನವನ್ನೂ ಬಿಡುಗಡೆ ಮಾಡುತ್ತಾರೆ.ರೆ ಮಂಡ್ಯ ಜಿಲ್ಲೆಯಾದ್ಯಂತ ಬಿಜೆಪಿ ಬಲಿಷ್ಟವಾಗಿ ಕಟ್ಟುತ್ತೇವೆ. ನಮ್ಮ ಸರ್ಕಾರದ ಯೋಜನೆ ಮನೆಮನೆಗೆ ತಲುಪಿಸುತ್ತೇವೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು. : - - – - 7 – --