ಸಾರಿಗೆ ನೌಕಕರ ಬಹುದಿನದ ಬೇಡಿಕೆ ಈಡೇರಿಸಿದ ಕೆಎಸ್‌ಆರ್‌ಟಿಸಿ; ಸರ್ಕಾರಿ ನೌಕರರಂತೆ ವೇತನ ಸೌಲಭ್ಯ ಸಾರಿಗೆ ಇಲಾಖೆ ನೌಕರರಿಗೂ ಕೂಡ ಸರ್ಕಾರಿ ನೌಕರರಿಗೆ ವೇತನ ಪಾವತಿಸುವ ಮಾದರಿಯಲ್ಲಿಯೇ ಹೆಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ವೇತನ ಪಾವತಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಬೆಂಗಳೂರು (ಆ.07):ರಾಜ್ಯದ ಎಲ್ಲ ಸಾರಿಗೆ ಇಲಾಖೆ ನೌಕರರಿಗೂ ಕೂಡ ಸರ್ಕಾರಿ ನೌಕರರಿಗೆ ವೇತನ ಪಾವತಿಸುವ ಮಾದರಿಯಲ್ಲಿಯೇ ಹೆಚ್‌ಆರ್‌ಎಂಎಸ್ ( -) ತಂತ್ರಾಂಶದ ಮೂಲಕ ವೇತನ ಪಾವತಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮುಂದಾಗಿದೆ. ಕೆಎಸ್‌ಆರ್‌ಟಿಸಿಯ ಎಲ್ಲ ನೌಕರರಿಗೆ ಆಗಸ್ಟ್ ತಿಂಗಳಿಂದ ತಂತ್ರಾಂಶದನ್ವಯ ವೇತನ ಪಾವತಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಹೆಚ್‌ಆರ್‌ಎಂಎಸ್ ತಂತ್ರಾಂಶದಲ್ಲಿ ದಾಖಲಾಗುವ ಹಾಜರಾತಿ ಮತ್ತು ರಜೆ ಮಂಜೂರಾತಿಯನ್ವಯ ವೇತನ ಪಾವತಿ ಕಡ್ಡಾಯ. ವೇತನ ಹೊರತುಪಡಿಸಿ ಬೇರೆ ಮಾದರಿಯ ವೇತನ ಬಿಲ್ಲು ತಯಾರಿಸಲು ಅವಕಾಶವಿಲ್ಲ. ಹೆಚ್‌ಆರ್‌ಎಂಎಸ್ ಅಡಿಯಲ್ಲಿ ಸಂಬಳ ನೀಡುವಂತೆ 2020 ರಿಂದ ನೌಕರರು ಮಾಡುತ್ತಲೇ ಇದ್ದರು. ಈ ಹಿನ್ನೆಲೆಯಲ್ಲಿ ಬಹುದಿನಗಳ ನೌಕರರ ಬೆಡಿಕೆಯನ್ನು ಈಡೇರಿಸಲಾಗಿದೆ. ಆಗಸ್ಟ್‌ ತಿಂಗಳ ವೇತನದಿಂದಲೇ ಹೊಸ ತಂತ್ರಾಂಶದ ಮೂಲಕ ವೇತನ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಉಡುಪಿಯಲ್ಲಿ ನಿಂತಲ್ಲೇ ಅಲ್ಲಾಡುತ್ತಿದ್ದ ಕಾರು; ಜನರಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ರತಿಕ್ರೀಡಾ ಜೋಡಿ! ಹೆಚ್‌ಆರ್‌ಎಂಎಸ್ ಸೌಲಭ್ಯಗಳೇನು? ನಮ್ಮ ಮೆಟ್ರೋ 12 ವರ್ಷದ ಬಳಿಕ ದಾಖಲೆಯ ರೈಡರ್‌ಶಿಪ್; ಒಂದೇ ದಿನ 8.26 ಲಕ್ಷ ಪ್ರಯಾಣಿಕರ ಸಂಚಾರ