ಕೇರಳದ ಭೀಕರ ಭೂಕುಸಿತದ ಉಪಗ್ರಹ ಚಿತ್ರ ಇಸ್ರೋ ಬಿಡುಗಡೆ : ವಯನಾಡ್‌ನಲ್ಲಿ ಕುಸಿದದ್ದು ಬರೊಬ್ಬರಿ 21 ಎಕರೆಯ ದೊಡ್ಡ ಗುಡ್ಡ! ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದೆ ಹಾಗೂ ಈ ಕುರಿತಾದ ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ. ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದೆ ಹಾಗೂ ಈ ಕುರಿತಾದ ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ. ಸಮುದ್ರ ಮಟ್ಟದಿಂದ 1500 ಮೀಟರ್‌ ಎತ್ತರದಲ್ಲಿರುವ ಗುಡ್ಡದ 86,000 ಚದರ ಮೀಟರ್‌ನಷ್ಟು (21 ಎಕರೆ) ಭಾಗ ಕುಸಿದಿದ್ದು, ಅದರ ಅವಶೇಷವು ಸಮೀಪದ ಇರುವೈಪುಳ ನದಿಯಲ್ಲಿ 8 ಕಿ.ಮೀ.ನಷ್ಟು ದೂರ ತೇಲಿಕೊಂಡು ಹೋಗಿದೆ. ಇದರಿಂದಾಗಿ ನದಿ ಅಕ್ಕಪಕ್ಕದ ಇಳಿಜಾರು ಪ್ರದೇಶದ 4 ಗ್ರಾಮಗಳು ನಾಮಾವಶೇಷವಾದವು ಎಂದು ಗೊತ್ತಾಗಿದೆ.ಇಸ್ರೋ ಗುರುವಾರ 2 ಉಪಗ್ರಹ ಚಿತ್ರ ಪ್ರಕಟಿಸಿದೆ. ಮೊದಲನೆಯ ಚಿತ್ರದಲ್ಲಿ ಈ ಹಿಂದೊಮ್ಮೆ ಸಂಭವಿಸಿದ ಭೂಕುಸಿತದ ದೃಶ್ಯವಿದೆ. ವಯನಾಡು ಬಳಿಕ ಕೇರಳದ ಮತ್ತೊಂದು ಜಿಲ್ಲೆಯಲ್ಲೂ 9 ಬಾರಿ ಭೂಕುಸಿತ, ಓರ್ವ ನಾಪತ್ತೆ, 12 ಮನೆಗಳು ಸರ್ವನಾಶ! ಈಗ ಉಂಟಾದ ಭೂಕುಸಿತದ ಸ್ಥಳದಲ್ಲೇ ಹಿಂದೆಯೂ ಈಗಿನಷ್ಟು ಅಲ್ಲದಿದ್ದರೂ ತಕ್ಕಮಟ್ಟಿಗೆ ಭೂಕುಸಿತ ಆಗಿತ್ತು. ಅರ್ಥಾತ್‌ ಈ ಸ್ಥಳವು ಭೂಕುಸಿತದ ಅಪಾಯವನ್ನು ತನ್ನೊಡಲಿನಲ್ಲೇ ಇರಿಸಿಕೊಂಡಿತ್ತು ಮತ್ತು ಈ ಭಾಗದ ಜನರು ಅದನ್ನು ನಿರ್ಲಕ್ಷಿಸಿ ಇಲ್ಲೇ ವಾಸವಾಗಿದ್ದರು ಎಂಬುದನ್ನು ತೋರಿಸುತ್ತದೆ.ಈಗಿನ ಭೂಕುಸಿತವು ಹಳೆಯ ಸ್ಥಳದಲ್ಲೇ ಕುಸಿತ ಆಗಿದ್ದನ್ನು ಉಪಗ್ರಹ ಚಿತ್ರ ತೋರಿಸಿದ್ದು ಅದರಲ್ಲಿ ಕುಸಿತದ ಭಯಾನಕ ಚಿತ್ರಣ ಸ್ಪಷ್ಟವಾಗಿ ಕಾಣಿಸುತ್ತದೆ. ಮನ ಕಲುಕಿದ ಶವಗಳ ನಡುವೆ ತಮ್ಮವರಿಗಾಗಿ ಹುಡುಕಾಟ, ಸಿಕ್ಕಿದವರ ಕಣ್ಣಲ್ಲಿ ನೀರು ಜು.29 ಹಾಗೂ 30ರಂದು 57 ಸೆಂ.ಮೀ.ನಷ್ಟು ಭಾರಿ ಮಳೆ ಬಿದ್ದಿತ್ತು. ಇದರ ಪರಿಣಾಮ, ಸಮುದ್ರ ಮಟ್ಟಕ್ಕಿತ 1500 ಮೀ. (1.5 ಕಿ.ಮೀ.) ಎತ್ತರದಲ್ಲಿರುವ ಬೆಟ್ಟದ ಮೇಲಿನ 86,000 ಚದರ ಮೀಟರ್‌ ಭೂಭಾಗ (ಸುಮಾರು 21 ಎಕರೆ) ಹಠಾತ್‌ ಕುಸಿದಿದೆ. ಅದರ ಅವಶೇಷವು ಇರುವೈಪುಳ ನದಿಯಲ್ಲಿ 8 ಕಿ.ಮೀ.ನಷ್ಟು ದೂರ ತೇಲಿಕೊಂಡು ಇಳಿಜಾರು ಪ್ರದೇಶದತ್ತ ನುಗ್ಗಿದೆ. ಇದು ಮುಂದುವರಿದು ವಯನಾಡ್‌ ಸನಿಹದ 4 ಹಳ್ಳಿಗಳನ್ನು ಆಪೋಶನ ತೆಗೆದುಕೊಂಡಿದೆ. ಹೈದರಾಬಾದ್‌ನಲ್ಲಿರುವ ಎನ್‌ಆರ್‌ಎಸ್‌ಸಿ ಕೇಂದ್ರ ಹಾರಿಬಿಟ್ಟಿರುವ ಕಾರ್ಟೋಸ್ಯಾಟ್‌-3 ಉಪಗ್ರಹ ಮತ್ತು ರಿಸ್ಯಾಟ್‌ ಉಪಗ್ರಹಗಳು ಈ ಚಿತ್ರಗಳನ್ನು ಸೆರೆಹಿಡಿದಿವೆ. ಇವು ಮೋಡದ ಮರೆಯನ್ನೂ ಭೇದಿಸಿ ಭೂಮಿಯ ಮೇಲ್ಭಾಗದ ಸ್ಪಷ್ಟ ಚಿತ್ರಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿವೆ.