ದಾಬಸ್‌ಪೇಟೆ: ಫೋನ್ ಬಳಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ ಯಾವಾಗಲೂ ಫೋನಿನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಲಿಖಿತಾ ತಂದೆ ನಾರಾಯಣ್ ಬೈದು ಬುದ್ದಿ ಹೇಳಿದ್ದರು. ಇದರಿಂದ ಕೋಪಗೊಂಡ ಲಿಖಿತಾ ರೂಮಿನಲ್ಲಿ ಪ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ದಾಬಸ್‌ಪೇಟೆ(ಮೇ.09):ಫೋನ್ ಬಳಸದಂತೆ ಪೋಷಕರು ಬುದ್ದಿ ವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿ ನಡೆದಿದೆ. ತಾಲೂಕಿನ ತಿಪ್ಪಗೊಂಡನಹಳ್ಳಿ ಲಿಖಿತಾ (18) ನೇಣಿಗೆ ಶರಣಾದ ಯುವತಿ. ಪ್ಯಾರಾಮೆಡಿಕಲ್‌ ಓದುತ್ತಿದ್ದ ಲಿಖಿತಾ, ಇತ್ತೀಚೆಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಲವ್ ಫೈಲೂರ್ ಅಂತ ವ್ಯಕ್ತಿ ಆತ್ಮಹತ್ಯೆ ಮಾಡ್ಕೊಂಡ್ರೆ ಹೆಣ್ಣಲ್ಲ ಹೊಣೆ: ಹೈ ಕೋರ್ಟ್ ಯಾವಾಗಲೂ ಫೋನಿನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಲಿಖಿತಾ ತಂದೆ ನಾರಾಯಣ್ ಬೈದು ಬುದ್ದಿ ಹೇಳಿದ್ದರು. ಇದರಿಂದ ಕೋಪಗೊಂಡು ರೂಮಿನಲ್ಲಿ ಪ್ಯಾನ್‌ಗೆ ನೇಣು ಬಿಗಿದುಕೊಂಡಿದಾಳೆ.