ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್‌ ರಾಜಿ ಮಾಡಿಕೊಳ್ಳುತ್ತಿದೆಯೇ? ರಾಹುಲ್‌ ಗಾಂಧಿಗೆ 10 ಪ್ರಶ್ನೆ ಕೇಳಿದ ಅಮಿತ್‌ ಶಾ! ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅನ್ನು ಟಾರ್ಗೆಟ್‌ ಮಾಡಿದ್ದಾರೆ. ರಾಹುಲ್ ಗಾಂಧಿಗೆ 10 ಪ್ರಶ್ನೆಗಳನ್ನು ಕೇಳಿರುವ ಶಾ, ಇದರಲ್ಲಿ ಕಾಂಗ್ರೆಸ್ ದೇಶದ ಭದ್ರತೆ ಮತ್ತು ಐಕ್ಯತೆಯೊಂದಿಗೆ ಆಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. :ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಾ ಜನರ ಎದುರು ನಿಂತಿವೆ. ದೇಶದ ಪ್ರಮುಖ ರಾಷ್ಟ್ರೀಯ ಪಕ್ಷವಾದ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಸಂಬಂಧವನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿಗೆ ಪ್ರಶ್ನೆಗಳನ್ನು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಹುಲ್ ಗಾಂಧಿಗೆ 10 ಪ್ರಶ್ನೆಗಳನ್ನು ಕೇಳಿದ ಶಾ, ಅಧಿಕಾರದ ದುರಾಸೆಯಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ದೇಶದ ಭದ್ರತೆ ಮತ್ತು ಐಕ್ಯತೆಯೊಂದಿಗೆ ಆಟವಾಡುತ್ತಿದ್ದಾರೆ ಎಂದು ಹೇಳಿದರು. ಅಬ್ದುಲ್ಲಾ ಕುಟುಂಬದ ನ್ಯಾಷನಲ್‌ ಕಾನ್ಫರೆನ್ಸ್‌ ಜೊತೆ ಸೇರಿಕೊಳ್ಳುವ ಮೂಲಕ ದೇಶದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಹೊರಟಿದೆ ಎಂದು ದೂರಿದ್ದಾರೆ. ಕೇಂದ್ರ ಗೃಹ ಸಚಿವರು ರಾಹುಲ್ ಗಾಂಧಿಗೆ ಕೇಳಿದ ಪ್ರಶ್ನೆಗಳು.. 1. ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ಪ್ರತ್ಯೇಕ ಧ್ವಜದ ನ್ಯಾಷನಲ್ ಕಾನ್ಫರೆನ್ಸ್ ಭರವಸೆಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆಯೇ? 2. ಆರ್ಟಿಕಲ್ 370 ಮತ್ತು ಆರ್ಟಿಕಲ್ 35 ಎ ಅನ್ನು ಮರಳಿ ತರುವ ಮೂಲಕ ಜಮ್ಮು ಮತ್ತು ಕಾಶ್ಮೀರವನ್ನು ಅಶಾಂತಿ ಮತ್ತು ಭಯೋತ್ಪಾದನೆಯ ಯುಗಕ್ಕೆ ತಳ್ಳುವ ಜೆಕೆಎನ್‌ಸಿ ನಿರ್ಧಾರವನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆಯೇ? 3. ಕಾಶ್ಮೀರದ ಯುವಕರ ಬದಲು ಪಾಕಿಸ್ತಾನದೊಂದಿಗೆ ಮಾತುಕತೆ ಮಾಡಬೇಕು ಎನ್ನುವ ಪ್ರತ್ಯೇಕತಾವಾದವನ್ನು ಮತ್ತೆ ಉತ್ತೇಜಿಸುವುದನ್ನು ಕಾಂಗ್ರೆಸ್ ಬೆಂಬಲಿಸುತ್ತದೆಯೇ? 4. ಪಾಕಿಸ್ತಾನದೊಂದಿಗೆ 'ಎಲ್‌ಒಸಿ ಟ್ರೇಡ್‌' ಪ್ರಾರಂಭಿಸುವ ನ್ಯಾಷನಲ್ ಕಾನ್ಫರೆನ್ಸ್ ನಿರ್ಧಾರದಿಂದ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಮತ್ತೊಮ್ಮೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುತ್ತಾರೆಯೇ ಮತ್ತು ಅವರ ಎಕೋಸಿಸ್ಟಮ್‌ ಅನ್ನು ಬೆಂಬಲಿಸುತ್ತಾರೆಯೇ? 5. ಭಯೋತ್ಪಾದನೆ, ಭಯೋತ್ಪಾದನೆ ಮತ್ತು ಬಂದ್‌ ಯುಗವನ್ನು ಮರಳಿ ತರಲು ಕಾಂಗ್ರೆಸ್ ಬೆಂಬಲಿಸುತ್ತದೆಯೇ, ಭಯೋತ್ಪಾದಕ ಮತ್ತು ಕಲ್ಲು ತೂರಾಟದ ಘಟನೆಗಳಲ್ಲಿ ಭಾಗಿಯಾಗಿರುವವರ ಕುಟುಂಬ ಸದಸ್ಯರನ್ನು ಸರ್ಕಾರಿ ಉದ್ಯೋಗಗಳಲ್ಲಿ ಮರು ನೇಮಕ ಮಾಡಿಕೊಳ್ಳುತ್ತದೆಯೇ? 6. ಈ ಮೈತ್ರಿಯು ಕಾಂಗ್ರೆಸ್ ಪಕ್ಷದ ಮೀಸಲಾತಿ ವಿರೋಧಿ ಮುಖವನ್ನು ಹೊರತಂದಿದೆ. ದಲಿತರು, ಗುಜ್ಜರ್‌ಗಳು, ಬಕರ್‌ವಾಲ್‌ಗಳು ಮತ್ತು ಪಹಾರಿಗಳಿಗೆ ತಮ್ಮ ಮೀಸಲಾತಿಯನ್ನು ಕೊನೆಗೊಳಿಸುವ ಮೂಲಕ ಮತ್ತೆ ಅನ್ಯಾಯ ಮಾಡುವ ಜೆಕೆಎನ್‌ಸಿಯ ಭರವಸೆಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆಯೇ?7. 'ಶಂಕರಾಚಾರ್ಯ ಪರ್ವತ'ವನ್ನು 'ತಖ್ತ್-ಎ-ಸುಲಿಮಾನ್' ಮತ್ತು 'ಹರಿ ಪರ್ವತ'ವನ್ನು 'ಕೊಹ್-ಎ-ಮರನ್' ಎಂದು ಕರೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆಯೇ? 8. ಜಮ್ಮು ಮತ್ತು ಕಾಶ್ಮೀರದ ಆರ್ಥಿಕತೆಯನ್ನು ಮತ್ತೊಮ್ಮೆ ಭ್ರಷ್ಟಾಚಾರದ ಬೆಂಕಿಗೆ ಎಸೆದು ಅದನ್ನು ಪಾಕಿಸ್ತಾನ ಬೆಂಬಲಿತ ಬೆರಳೆಣಿಕೆಯ ಕುಟುಂಬಗಳಿಗೆ ಹಸ್ತಾಂತರಿಸುವುದನ್ನು ಕಾಂಗ್ರೆಸ್ ಬೆಂಬಲಿಸುತ್ತದೆಯೇ?9. ಜಮ್ಮು ಮತ್ತು ಕಣಿವೆಯ ನಡುವಿನ ತಾರತಮ್ಯದ ಯ ರಾಜಕೀಯವನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆಯೇ? ದೋಡಾ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಸೈನಿಕ ತಾಯಿಗೆ ಮಾಡಿದ ಕೊನೆಯ ಕಾಲ್‌ನಲ್ಲಿ ಸುಳ್ಳು ಹೇಳಿದ್ದ!10.ಕಾಶ್ಮೀರಕ್ಕೆ ಸ್ವಾಯತ್ತತೆ ನೀಡುವ ಯ ವಿಭಜಿತ ಚಿಂತನೆ ಮತ್ತು ನೀತಿಗಳನ್ನು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಬೆಂಬಲಿಸುತ್ತಾರೆಯೇ? ಜಮ್ಮು ಕಾಶ್ಮೀರ, ಹರ್ಯಾಣ ವಿಧಾನಸಭೆ ಚುನಾವಣೆ ಘೋಷಣೆ: ಸೆ.18 ಮತದಾನ ಆರಂಭ, ಅ. 4ಕ್ಕೆ ಫಲಿತಾಂಶ!