‌: ಕರ್ನಾಟಕ ಕ್ರಿಕೆಟ್ ತಂಡಕ್ಕೆ ಮಯಾಂಕ್‌, ಪಡಿಕ್ಕಲ್‌ ಬಲ * ರಣಜಿ ಟ್ರೋಫಿ ನಾಕೌಟ್ ಪಂದ್ಯಗಳಿಗೆ ಕರ್ನಾಟಕ ಕ್ರಿಕೆಟ್ ತಂಡ ಪ್ರಕಟ * ಮಯಾಂಕ್ ಅಗರ್‌ವಾಲ್, ದೇವದತ್ ಪಡಿಕ್ಕಲ್‌ಗೆ ಸ್ಥಾನ, ಮನೀಶ್ ಪಾಂಡ್ಯ ನಾಯಕ * ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಕರ್ನಾಟಕಕ್ಕೆ ಉತ್ತರ ಪ್ರದೇಶ ಸವಾಲು ಬೆಂಗಳೂರು(ಜೂ.02): 2021-2022ನೇ ಸಾಲಿನ ರಣಜಿ ಟ್ರೋಫಿ ನಾಕೌಟ್‌ ಪಂದ್ಯಗಳಿಗೆ ( ) 20 ಸದಸ್ಯರ ಕರ್ನಾಟಕ ತಂಡ ( ) ಪ್ರಕಟಗೊಂಡಿದ್ದು, ತಾರಾ ಆಟಗಾರರಾದ ಮಯಾಂಕ್‌ ಅಗರ್‌ವಾಲ್‌ ( ), ದೇವದತ್‌ ಪಡಿಕ್ಕಲ್‌ ( ) ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮನೀಶ್‌ ಪಾಂಡೆ ( ) ನಾಯಕರಾಗಿ ಮುಂದುವರಿದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿರುವ ಕೆ.ಎಲ್‌.ರಾಹುಲ್‌ ( ) ಮತ್ತು ಪ್ರಸಿದ್ಧ್ ಕೃಷ್ಣ ಅವರ ಸೇವೆ ಲಭ್ಯವಿಲ್ಲ. ಜೂನ್‌ 6ರಿಂದ ಬೆಂಗಳೂರು ಸಮೀಪದ ಆಲೂರು ಮೈದಾನದಲ್ಲಿ ಕರ್ನಾಟಕ, ಉತ್ತರ ಪ್ರದೇಶ ವಿರುದ್ಧ ಕ್ವಾರ್ಟರ್‌ ಫೈನಲ್‌ ಪಂದ್ಯವನ್ನು ಆಡಲಿದೆ. ದಕ್ಷಿಣ ಆಫ್ರಿಕಾ ವಿರುದ್ದದ 5 ಪಂದ್ಯಗಳ ಟಿ20 ಸರಣಿಗೆ ಕೆ ಎಲ್ ರಾಹುಲ್, ಟೀಂ ಇಂಡಿಯಾ ( ) ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಇಂಗ್ಲೆಂಡ್‌ ವಿರುದ್ದ ಮರು ನಿಗದಿಪಡಿಸಲಾಗಿರುವ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ. ವರ್ಕ್‌ಲೋಡ್ ಮ್ಯಾನೇಜ್ ಮಾಡುವ ಉದ್ದೇಶದಿಂದ ಪ್ರಸಿದ್ಧ್ ಕೃಷ್ಣಗೆ ( ) ರಣಜಿ ಟ್ರೋಫಿ ನಾಕೌಟ್ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಪ್ರಸಿದ್ಧ್‌ ಕೃಷ್ಣಗೆ ವಿಶ್ರಾಂತಿ ನೀಡಿರುವುದರಿಂದ ವಿ ಕೌಶಿಕ್‌ಗೆ ರಾಜ್ಯ ತಂಡದಲ್ಲಿ ಮಣೆ ಹಾಕಲಾಗಿದೆ. ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಸ್ಪಿನ್ ವಿಭಾಗ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿದೆ. ರಾಜ್ಯ ತಂಡದಲ್ಲಿ ಅನುಭವಿ ಸ್ಪಿನ್ನರ್‌ಗಳಾದ ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಕೆ ಸಿ ಕರಿಯಪ್ಪ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲಿ ತಾರಾ ಆಟಗಾರರಾದ ಮಯಾಂಕ್ ಅಗರ್‌ವಾಲ್, ರವಿಕುಮಾರ್ ಸಮರ್ಥ್‌, ಕರುಣ್ ನಾಯರ್ ( ), ದೇವದತ್ ಪಡಿಕ್ಕಲ್ ತಮ್ಮ ಅನುಭವವನ್ನು ನಾಕೌಟ್ ಪಂದ್ಯಗಳಲ್ಲಿ ಉತ್ತಮವಾಗಿ ಬಳಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಮೇಲ್ನೋಟಕ್ಕೆ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಕರ್ನಾಟಕ ತಂಡವು ಸಾಕಷ್ಟು ಸಮತೋಲಿತವಾಗಿ ಕಂಡು ಬಂದಿದ್ದು, ಉತ್ತರ ಪ್ರದೇಶ ವಿರುದ್ಧ ಕ್ವಾರ್ಟರ್‌ ಫೈನಲ್‌ನಲ್ಲಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಕರ್ನಾಟಕ ತಂಡವು, ನಾಕೌಟ್ ಹಂತದಲ್ಲಿ ತನ್ನ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. 2022ರ ಐಪಿಎಲ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಚಚ್ಚಿಸಿಕೊಂಡ ಟಾಪ್ 5 ಬೌಲರ್‌ಗಳಿವರು..! ಇತ್ತೀಚೆಗಷ್ಟೇ ಮುಕ್ತಾಯವಾದ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕನ್ನಡಿಗರಾದ ಮನೀಶ್ ಪಾಂಡೆ, ಮಯಾಂಕ್ ಅಗರ್‌ವಾಲ್ ಹಾಗೂ ದೇವದತ್ ಪಡಿಕ್ಕಲ್ ಗಮನಾರ್ಹ ಪ್ರದರ್ಶನ ತೋರಲು ವಿಫಲರಾಗಿದ್ದರು. ಐಪಿಎಲ್ ಟೂರ್ನಿಯಲ್ಲಿ ಮಾಡಿದ ಯಡವಟ್ಟುಗಳನ್ನು ತಿದ್ದಿಕೊಂಡು ರಣಜಿ ಟ್ರೋಫಿ ಟೂರ್ನಿಯ ನಾಕೌಟ್ ಪಂದ್ಯದಲ್ಲಿ ಈ ಎಲ್ಲಾ ಆಟಗಾರರು ಯಾವ ರೀತಿಯ ಪ್ರದರ್ಶನ ತೋರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಕರ್ನಾಟಕ ಕ್ರಿಕೆಟ್ ತಂಡ: ಮನೀಶ್‌ ಪಾಂಡೆ(ನಾಯಕ), ಆರ್‌.ಸಮರ್ಥ್‍(ಉಪನಾಯಕ), ಮಯಾಂಕ್‌ ಅಗರ್‌ವಾಲ್‌, ದೇವದತ್‌ ಪಡಿಕ್ಕಲ್‌, ಕರುಣ್‌ ನಾಯರ್‌, ಕೆ.ವಿ.ಸಿದ್ಧಾರ್ಥ್‌‍, ನಿಶ್ಚಲ್‌ ಡಿ., ಶರತ್‌ ಶ್ರೀನಿವಾಸ್‌, ಬಿ.ಆರ್‌.ಶರತ್‌, ಶ್ರೇಯಸ್‌ ಗೋಪಾಲ್‌, ಕೆ.ಗೌತಮ್‌, ಶುಭಾಂಗ್‌, ಜೆ.ಸುಚಿತ್‌, ಕೆ.ಸಿ.ಕಾರ್ಯಪ್ಪ, ರೋನಿತ್‌ ಮೋರೆ, ವಿ.ಕೌಶಿಕ್‌, ವೈಶಾಖ್‌ ವಿ., ವೆಂಕಟೇಶ್‌ ಎಂ., ವಿದ್ವತ್‌ ಕಾವೇರಪ್ಪ, ಕಿಶನ್‌ ಎಸ್‌.