ಸ್ನೇಹಿತೆ ಆತ್ಮಹತ್ಯೆ; ಕಾಲ್‌ ಪಿಕ್‌ ಮಾಡಿದ್ದರೆ ಬದುಕುತ್ತಿದ್ದಳು ಎಂದು ಕಣ್ಣೀರಿಟ್ಟ 'ಕೆಂಡಸಂಪಿಗೆ' ನಟಿ ಕಾವ್ಯಾ ಜೀವನದಲ್ಲಿ ಸ್ನೇಹಿತರು ಎಷ್ಟು ಮುಖ್ಯ ಎಂದು ಪ್ರಶ್ನಿಸಿದ್ದಾಗ ವೇದಿಕೆ ಮೇಲೆ ಕಣ್ಣೀರಿಟ್ಟ ಕಾವ್ಯಾ. ಪೋನ್ ಕಾಲ್ ಎಷ್ಟು ಮುಖ್ಯವಾಗುತ್ತದೆ ತಿಳಿಸಿದ್ದಾರೆ. ಜೀವನದಲ್ಲಿ ಸ್ನೇಹಿತರು ಎಷ್ಟು ಮುಖ್ಯ ಎಂದು ಪ್ರಶ್ನಿಸಿದ್ದಾಗ ವೇದಿಕೆ ಮೇಲೆ ಕಣ್ಣೀರಿಟ್ಟ ಕಾವ್ಯಾ. ಪೋನ್ ಕಾಲ್ ಎಷ್ಟು ಮುಖ್ಯವಾಗುತ್ತದೆ ತಿಳಿಸಿದ್ದಾರೆ. ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕೆಂಡಸಂಪಿಗೆ ಧಾರಾವಾಹಿಯಲ್ಲಿ ಕಾವ್ಯಾ ಶೈವಾ ಸ್ನೇಹಿತರ ಜೀವನಕ್ಕೆ ಎಷ್ಟು ಮುಖ್ಯ ಅಂತ ಪ್ರಶ್ನೆ ಬಂದಾಗ ಉತ್ತರಿಸಿದ ರೀತಿಗೆ ಎಲ್ಲರೂ ಕಣ್ಣೀರಿಟ್ಟಿದ್ದಾರೆ. 'ನಾವು 5 ಜನ ಒಂದು ಗ್ರೂಪ್‌ನಲ್ಲಿರುವುದು ಅದರಲ್ಲಿ ಒಬ್ಬಳು ನನಗೆ ತುಂಬಾನೇ ಕ್ಲೋಸ್. ಹೇಗೆ ಅಂದ್ರೆ ದಿನ ಕಾಲ್ ಅಥವಾ ಮೆಸೇಜ್ ಮಾಡಿಕೊಂಡು ನಮ್ಮ ದಿನ ಹೇಗಿತ್ತು ಏನೆಲ್ಲಾ ಆಗುತ್ತಿತ್ತು ಎಂದು ಮಾತನಾಡುತ್ತೀವಿ. ಒಂದು ದಿನ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದೆ. ಆಗ ಆಕೆ ನನಗೆ ಕಾಲ್ ಮಾಡಿದ್ದಾಳೆ. ತುಂಬಾ ಸಲ ಕರೆ ಮಾಡಿದ್ದಾರೆ. ಬೇಕು ಬೇಕು ಅಂತ ಕಾಲ್ ಪಿಕ್ ಮಾಡದೆ ಇರಲಿಲ್ಲ ಶೂಟಿಂಗ್‌ನಲ್ಲಿ ಪಿಕ್ ಮಾಡಬಾರದು ಅಂತಾನೂ ಯಾರೂ ಹೇಳಿಲ್ಲ ಆದರೆ ಕಾರಣ ಗೊತ್ತಿಲ್ಲ ನಾನು ಪಿಕ್ ಮಾಡಿಲ್ಲ. ಅವತ್ತು ಶೂಟಿಂಗ್ ಮುಗಿಸಿಕೊಂಡು ನಾನು ಹೋಗಿ ಮನೆಯಲ್ಲಿ ರೆಸ್ಟ್ ಮಾಡುತ್ತಿರುವಾಗ ಮಾರನೇ ದಿನ ಕರೆ ಬರುತ್ತೆ. ಆಕೆ ಇನ್ನಿಲ್ಲ ಅಂತ. ಆಕೆ ಏನು ಹೇಳುವುದಕ್ಕೆ ಕಾಲ್ ಮಾಡಿದಳು ನನಗೆ ಗೊತ್ತಿಲ್ಲ ದಿನ ಮಾತನಾಡುತ್ತಿದ್ದರೂ ಯಾವ ನೋವಿನಲ್ಲಿ ಇದ್ದಳು ಗೊತ್ತಿಲ್ಲ. ಆದರೆ ನಾನು ಅವತ್ತು ಕರೆ ಮಾಡಿದ್ದರೆ ಬಹುಷ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಬಹುದಿತ್ತು. ನನ್ನ ಬಳಿ ಹೇಳಿಕೊಂಡಿರೆ ನೆಮ್ಮದಿಯಾಗಿರುತ್ತಿದ್ದಳು' ಎಂದು ಕಾವ್ಯಾ ಕಣ್ಣೀರಿಟ್ಟಿದ್ದಾರೆ. ಪದೇ ಪದೇ ಒಬ್ಬರು ನಿಮಗೆ ಕರೆ ಮಾಡುತ್ತಿದ್ದಾರೆ ಅಂದ್ರೆ ದಯವಿಟ್ಟು ಪಿಕ್ ಮಾಡಿ ಮಾತನಾಡಿ ಖಂಡಿತಾ ನಿಮ್ಮ ಆ ಕೆಲವೊಂದು ನಿಮಿಷ ಒಬ್ಬರ ಜೀವನ ಉಳಿಸುತ್ತದೆ' ಎಂದು ಕಾವ್ಯಾ ಹೇಳಿದ್ದಾರೆ. ಸ್ನೇಹಿತರು ತುಂಬಾನೇ ಮುಖ್ಯ ಅಂತ ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಸಾಕಷ್ಟು ಜನರು ಈ ರೀತಿ ಆಪ್ತರನ್ನು ಕಳೆದುಕೊಂಡಿರುವುದಾಗಿ ಹೇಳಿಕೊಂಡು ಭಾವುಕರಾಗಿದ್ದಾರೆ.