ಬೆಂಗಳೂರು-ಮಂಗಳೂರು ಸಂಪರ್ಕ ಕಡಿತ, ಪರ್ಯಾಯವಾಗಿರುವ ಈ ಮಾರ್ಗಗಳ ಬಗ್ಗೆ ನಿಮಗೆ ಗೊತ್ತೇ? ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿ 75 ಮತ್ತು ಕೊಡಗು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ಕೂಡ ಬಂದ್ ಮಾಡಲಾಗಿದೆ. ಹೀಗಾಗಿ ಪರ್ಯಾಯ ಸಂಪರ್ಕದ ಮಾಹಿತಿ ಇಲ್ಲಿ ನೀಡಲಾಗಿದೆ. ಬೆಂಗಳೂರು (ಜು.19):ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ ಹಿನ್ನೆಲೆ, ಗುಡ್ಡಕುಸಿತ, ಭೂಕುಸಿತ ಸಂಭವಿಸಿರುವ ಹಿನ್ನೆಲೆ ಕರಾವಳಿ ಭಾಗಗಳಿಗೆ ಬೆಂಗಳೂರಿನಿಂದ ಸಂಪರ್ಕ ಕಡಿತಗೊಂಡಿದೆ. ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿ 75 ಮತ್ತು ಕೊಡಗು ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ಕೂಡ ಬಂದ್ ಮಾಡಲಾಗಿದೆ. ಬಸ್‌ ಸಂಚಾರ ಸ್ಥಗಿತಗೊಂಡಿದ್ದು, ಹೆಚ್ಚುವರಿ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಹಗಲಿನ ಹೊತ್ತಿನಲ್ಲಿ ಕೆಲ ಮಾರ್ಗಗಳಲ್ಲಿ ಸ್ವಂತ ವಾಹನ ಇರುವವರು ಸಂಚಾರ ನಡೆಸಲು ಇಲ್ಲಿ ಕೆಲವು ಪರ್ಯಾಯ ಮಾರ್ಗಗಳ ಪಟ್ಟಿ ನೀಡಲಾಗಿದೆ. ವರುಣಾರ್ಭಟಕ್ಕೆ ಬೆಂಗಳೂರಿನ ಸಂಪರ್ಕ ಕಡಿದುಕೊಂಡ ಮಂಗಳೂರು, ಯಾರ್ ಕೇಳ್ತಾರೆ ಪ್ರಯಾಣಿಕರ ಗೋಳು? ಬೆಂಗಳೂರಿನಿಂದ ಮಂಗಳೂರಿಗೆ ಇರುವ ಮಾರ್ಗಗಳ ಪಟ್ಟಿ: ಬೆಂಗಳೂರಿನಿಂದ ಉಡುಪಿಗೆ ಇರುವ ಮಾರ್ಗಗಳ ಪಟ್ಟಿ: ವಿಶೇಷ ರೈಲುಗಳ ವಿವರ: ರೈಲು ಸಂಚಾರವೂ ಸುಲಭವಲ್ಲ:ಇನ್ನು ಹೆಚ್ಚುವರಿ ರೈಲು ಬಿಟ್ಟರೂ ಕರಾವಳಿಗೆ ರೈಲು ಸಂಚಾರ ಸುಲಭವಲ್ಲ. ಸಕಲೇಶಪುರದಿಂದ ಹೊರಟು ಕುಕ್ಕೆಸುಬ್ರಹ್ಮಣ್ಯ ದಾಟಬೇಕಾದರೆ ಅದು ಜೀವ ಕೈನಲ್ಲಿ ಹಿಡಿದೇ ಸಾಗಬೇಕು ಏಕೆಂದರೆ ಗುಂಡ್ಯ ಬಳಿ ಮಳೆ ಅವಾಂತರದಿಂದ ಗುಡ್ಡ ಕುಸಿಯವುದು ಸಾಮಾನ್ಯವಾಗಿದೆ. ಒಂದು ವೇಳೆ ರೈಲು ಹಳಿಯ ಮೇಲೆ ಗುಡ್ಡ ಕುಸಿದರೆ, ಕಲ್ಲುಬಂಡೆ ನಿಂತರೆ ಅಲ್ಲೂ ಸಂಚಾರ ಬಂದ್ ಆಗಲಿದೆ. ಇನ್ನು ವಿಮಾನ ಸಂಚಾರ ಕೂಡ ಬಡವರಿಗಲ್ಲ. ಆದರೆ ಪ್ರತೀಕೂಲ ಹವಾಮಾನ ಎದುರಾದರೆ ವಿಮಾನ ಕೂಡ ರದ್ದಾಗುವ ಸಾಧ್ಯತೆ ಹೆಚ್ಚಿದೆ.