ಚಿತ್ರದುರ್ಗ: ಹೊಸದುರ್ಗದ ಬಳಿ ಬೈಕ್‌ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ(ಜು.14):ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ‌ ಸಿದ್ದಾಪುರ ಗ್ರಾಮದ ಪ್ರವೀಣ್(26) ಹಾಗೂ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದ ಯೊಗೀಶ(27) ಮೃತ ದುರ್ದೈವಿಗಳು. ರಾಯಚೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌, ಸ್ಥಳದಲ್ಲೇ ಚಾಲಕ ಸಾವು ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.