ಉಡುಪಿ: 10ನೇ ಕ್ಲಾಸ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನಳಾಗಿದ್ದಾಳೆ. ಉಡುಪಿ(ಜು.04):ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನಳಾಗಿದ್ದಾಳೆ. ಬೆಳಗ್ಗೆ ಎದೆ ನೋವು ಕಾಣಿಸಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 33 ಕೋಟಿ ಗೆದ್ದವನಿಗೆ ಒಂದು ರೂ ಅನುಭವಿಸೋ ಯೋಗ ಇಲ್ಲ: ಲಾಟರಿ ಗೆಲ್ಲುತ್ತಿದ್ದಂತೆ ಎಳೆದೊಯ್ದ ಜವರಾಯ ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾಳೆ. ಆಕೆ ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿ ಪುತ್ರಿ.