ಕೊಡಗು: ತೆರೆದ ಬಾವಿಗೆ ಬಿದ್ದು ಕಾಡಾನೆ ಸಾವು ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. ಕೊಡಗು(ಜೂ.18):ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಿನ್ನೆ(ಸೋಮವಾರ) ನಡೆದಿದೆ. ಸುಮಾರು 48 ವಯಸ್ಸಿನ ಗಂಡಾನೆ ಮೃತಪಟ್ಟಿದೆ. ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಘಟನೆ ನಡೆದಿದೆ ತಿಳಿದು ಬಂದಿದೆ. 7 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡ ಪಂಚಾಯಿತಿಯ ವಿದ್ಯುತ್ ಸಂಪರ್ಕ ಕಡಿತ! ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿ ನಿರ್ಮಿಸಲಾಗಿತ್ತು. ಪಾಲೇಂಗಡ ಬಿದ್ದಪ್ಪ ಶಂಬು ಅವರ ಮನೆ ಮುಂದೆ ಘಟನೆ ನಡೆದಿದೆ.