ರಾಜ್ಯದಲ್ಲಿ ಬೇಜವಾಬ್ದಾರಿ ಸರಕಾರ: ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ರೈತರು ಸಂಕಷ್ಟದಲ್ಲಿದ್ದರೂ ಈ ಸರಕಾರ ಕೈಕಟ್ಟಿ ಕೂತಿದೆ. ಬೇಜವಾಬ್ದಾರಿ ಸರ್ಕಾರವಿದೆ ಎಂದುಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ರೈತರು ಸಂಕಷ್ಟದಲ್ಲಿದ್ದರೂ ಈ ಸರಕಾರ ಕೈಕಟ್ಟಿ ಕೂತಿದೆ. ಬೇಜವಾಬ್ದಾರಿ ಸರ್ಕಾರವಿದೆ ಎಂದುಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಬಾಗಲಕೋಟೆಯಲ್ಲಿ ಇಂದು ಏರ್ಪಡಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ( )ಯವ ಬೃಹತ್ ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ರೈತರು ಸಂಕಷ್ಟದಲ್ಲಿದ್ದರೂ ಈ ಸರಕಾರ ಕೈಕಟ್ಟಿ ಕೂತಿದೆ ಎಂದು ಟೀಕಿಸಿದರು. ಇಂಥ ಬೇಜವಾಬ್ದಾರಿ ಸರಕಾರವು ಕರ್ನಾಟಕದಲ್ಲಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ತಿಳಿಸಿದರು. ಮಾಜಿ ಡಿಸಿಎಂ ಗೋವಿಂದ ಕಾರಜೋಳ( ) ಅವರು ಮಾತನಾಡಿ, ಕಾಂಗ್ರೆಸ್ ಎಂದರೆ ಮೋಸದಾಟದ ಪಕ್ಷ. ಮೋದಿಜೀ ಅವರ ಗ್ಯಾರಂಟಿ ( )ಎಂದರೆ ಅಭಿವೃದ್ಧಿಯ ಖಚಿತತೆ. ಬಿಜೆಪಿ- ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಎಲ್ಲ 28 ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು. ದೇಶಾದ್ಯಂತ ಮೋದಿ ಪರ ಅಲೆ ಇದೆ. ಜನರ ಉತ್ಸಾಹ ನೋಡಿದರೆ ಈ ಬಾರಿ 28 ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಬಿಜೆಪಿ ಗೆಲುವು ಖಚಿತ ಎಂದರು. ಶಾಸಕ ಬಿ.ಆರ್.ಪಾಟೀಲ ಯತ್ನಾಳ್( ) ಅವರು ಮಾತನಾಡಿ, ಸನಾತನ ಧರ್ಮ ಉಳಿಸಲು ಬಿಜೆಪಿಗೆ ಮತ ಕೊಡಿ ಎಂದು ವಿನಂತಿಸಿದರು. ಹುಬ್ಬಳ್ಳಿ ಘಟನೆ ನೆನಪಿರಲಿ; ಬಾಗಲಕೋಟೆ ಹೆಣ್ಮಕ್ಕಳ ರಕ್ಷಣೆಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ತಿಳಿಸಿದರು. ಬಟಾಟೆಯಿಂದ ಚಿನ್ನ ತೆಗೆಯುವ ರಾಹುಲ್ ಗಾಂಧಿ, ಪಿತ್ರಾರ್ಜಿತ ಆಸ್ತಿಗೂ ಶೇ 55 ತೆರಿಗೆ ಹಾಕುತ್ತಾರೆ ಎಂಬುದು ನೆನಪಿರಲಿ ಎಂದು ವಿವರಿಸಿದರು. ಮಾಜಿ ಡಿಸಿಎಂ ಗೋವಿಂದ ಕಾರಜೋಳ( ) ಅವರು ಮಾತನಾಡಿ, ಕಾಂಗ್ರೆಸ್ ಎಂದರೆ ಮೋಸದಾಟದ ಪಕ್ಷ. ಮೋದಿಜೀ ಅವರ ಗ್ಯಾರಂಟಿ ( )ಎಂದರೆ ಅಭಿವೃದ್ಧಿಯ ಖಚಿತತೆ. ಬಿಜೆಪಿ- ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಎಲ್ಲ 28 ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭ್ಯರ್ಥಿಗಳಾದ ರಮೇಶ್ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ್, ಮಾಜಿ ಸಚಿವರು, ಶಾಸಕರು, ಪಕ್ಷದ ರಾಜ್ಯ- ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಮುಖಂಡರು ವೇದಿಕೆಯಲ್ಲಿದ್ದರು. ವಿವಿಧ ಯೋಜನೆಗಳ ಮಹಿಳಾ ಫಲಾನುಭವಿಗಳು ಇದೇ ಸಂದರ್ಭದಲ್ಲಿ ಪ್ರಧಾನಿಯರಿಗೆ ಕೃತಜ್ಞತೆ ಸಲ್ಲಿಸಲು ಶಾಲು ಹೊದಿಸಿ ಸನ್ಮಾನ ಮಾಡಿದರು. ಕಂಬಳಿ ಹೊದಿಸಿ ಗೌರವಾರ್ಪಣೆ ಮಾಡಲಾಯಿತು.