2024: ಕಾರು ಬಿಟ್ಟು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಪ್ರಿಯಾಂಕ್ ಖರ್ಗೆ! ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿ ಅಚ್ಚರಿ ಮೂಡಿಸಿದರು. ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿ ಅಚ್ಚರಿ ಮೂಡಿಸಿದರು. ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿ ಅಚ್ಚರಿ ಮೂಡಿಸಿದರು. ನಾಸ್ಕಾಮ್ ಡಿಸೈನ್ ಮತ್ತು ಎಂಜಿನಿಯರಿಂಗ್ ಶೃಂಗಸಭೆ 2024( 2024) ರಲ್ಲಿ ಪಾಲ್ಗೊಳ್ಳಲು ಅವರು ವಿಧಾನ ಸೌಧ ಮೆಟ್ರೋ ನಿಲ್ದಾಣದಿಂದ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಿದರು. ಮೆಟ್ರೋದಲ್ಲಿ ಸಂಚರಿಸುವ ಮೂಲಕ ನಗರದ ಜನರ ದೈನಂದಿನ ಸಮಸ್ಯೆಗಳು ಆಲಿಸಲು, ಅವರ ಅನುಭವಗಳನ್ನು ಪಡೆಯಲು ಮೆಟ್ರೋದಲ್ಲಿ ಸಂಚರಿಸಿದರು. ಪರ್ಪಲ್ ಲೈನ್‌ನಲ್ಲಿ ಸುಮಾರು 40 ನಿಮಿಷಗಳ ಕಾಲ ಸಹ ಪ್ರಯಾಣಿಕರೊಂದಿಗೆ ಪ್ರಯಾಣಿಸಿದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು. ಸ್ಥಳೀಯ ಮೆಟ್ರೋ ಪ್ರಯಾಣಿಕರೊಂದಿಗೆ ಸಹಪ್ರಯಾಣಿಕರಂತೆ ಮಾತುಕತೆ ನಡೆಸುತ್ತರಿವುದು ಫೊಟೊದಲ್ಲಿ ಕಾಣಬಹುದು. ಇತ್ತೀಚೆಗೆ ದಕ್ಷಿಣ ಬೆಂಗಳೂರು ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಪಿಸಿ ಮೋಹನ್ ಮೆಟ್ರೋದಲ್ಲಿ ಪ್ರಯಾಣಿಸಿ ಜನರ ಸಮಸ್ಯೆ ಆಲಿಸಿ ಗಮನ ಸೆಳೆದಿದ್ದರು. ಇ ದೀಗ ಸಚಿವ ಪ್ರಿಯಾಂಕ್ ಖರ್ಗೆಯವರು ಸಹ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಶ್ರೀ ಸತ್ಯಸಾಯಿ ಆಸ್ಪತ್ರೆ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸುತ್ತಲೇ ಪ್ರಯಾಣಿಕ ಸಮಸ್ಯೆಗಳನ್ನ ಆಲಿಸಿದರು.