ಗುಡ್‌ನ್ಯೂಸ್: ಕರ್ನಾಟಕಕ್ಕೂ ಬಂತು ಮೊಬೈಲ್ ಕೊರೋನಾ ಟೆಸ್ಟಿಂಗ್ ಬೂತ್‌ ಕರ್ನಾಟಕದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಆತಂಕ ಸೃಷ್ಟಿಸಿದೆ. ಕೊರೋನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅತ್ಯಧಿಕ ತಪಾಸಣೆಗಳ ಅಗತ್ಯವಿದ್ದು ಇದಕ್ಕಾಗಿ ಮೊಬೈಲ್‌ ಬೂತ್‌ಗಳನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮೊಬೈಲ್ ಬೂತ್ ಪರಿಚಯ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕು ನಿಂಯಂತ್ರಿಸಲು ಮೊಬೈಲ್‌ ಬೂತ್‌ಗಳನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್​ ಕೊರೊನಾ ಟೆಸ್ಟಿಂಗ್​ ಬೂತ್​ ಉದ್ಘಾಟನೆ ಮಾಡಿದ್ರು. ಮನೋಜ್ ಎಂಬ ವ್ಯಕ್ತಿ ಈ ಮೊಬೈಲ್ ಬೂತ್ ಪರಿಚಯ ಮಾಡಿದ್ದಾರೆ. ಸದ್ಯ ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ 2 ಬೂತ್‌ಗಳನ್ನು ತಯಾರಿ ಮಾಡಲಾಗಿದೆ. ಮನೋಜ್ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆ ಜೊತೆ ಟೈ ಅಪ್ ಮಾಡಿಕೊಂಡಿದ್ದಾರೆ. ಮನೋಜ್ ಅವರ ಈ ಆವಿಷ್ಕಾರ ಮನೆ ಮನೆಗೆ ಹೋಗಿ ಕೊರೊನಾ ಪರೀಕ್ಷೆ ಮಾಡಲು ಸಹಾಯ ಮಾಡುತ್ತದೆ. ಮನೋಜ್ ಅವರ ಈ ಆವಿಷ್ಕಾರ ಮನೆ ಮನೆಗೆ ಹೋಗಿ ಕೊರೊನಾ ಪರೀಕ್ಷೆ ಮಾಡಲು ಸಹಾಯವಾಗಲಿದ್ದು, ಬೆಂಗಳೂರು ನಗರದ ಪ್ರತಿ ವಾರ್ಡ್​ಗಳಲ್ಲಿ ಇಂಥ ಮೊಬೈಲ್ ಟೆಸ್ಟಿಂಗ್ ಬೂತ್ ಸ್ಥಾಪನೆಯಾಗಲಿದೆ. ಈ ರೀತಿಯ ಮೊಬೈಲ್ ಟೆಸ್ಟಿಂಗ್ ಬೂತ್ ಇನ್ನು ಮುಂದೆ ಪ್ರತಿ ವರ್ಡ್ ಗಳಲ್ಲಿ ಸ್ಥಾಪಿಸಿ ಅದರ ಮೂಲಕ ಕೋವಿಡ್ 19 ಟೆಸ್ಟಿಂಗ್ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಮೂಲಕ ಹೆಚ್ಚಿನ ತಪಾಸಣೆಯನ್ನು ನಡೆಸಲು ಸಾಧ್ಯವಾಗುತ್ತಿದೆ. ಇದರ ಪರಿಣಾಮ ಕೊರೋನಾ ನಿಯಂತ್ರಣ ಮಾಡಲು ಮುಂದಿನ ದಿನಗಳಲ್ಲಿ ಸೂಕ್ತ ಮುನ್ನೆಚ್ಚರಿಕೆಗಳನ್ನು ವಹಿಸಲು ಸಾಧ್ಯ.