ಆಗ ಭಾರತ ಸರ್ಕಾರ ಹೇಳಿದಾಗ ‘ಖಾಸಗಿತನಕ್ಕೆ ಧಕ್ಕೆ’ ನೆಪ; ವಾಟ್ಸಪ್ ಈಗ ಏನಪ್ಪಾ? ನವದೆಹಲಿ (ನ.02): ಸಾಮಾಜಿಕ ಜಾಲತಾಣ ವಾಟ್ಸಪ್ ಬಳಸಿ ಹ್ಯಾಕರ್‌ಗಳು, ಭಾರತದ ಪತ್ರಕರ್ತರು ಹಾಗೂ ಸಾಮಾಜಿಕ ಹೋರಾಟಗಾರರಮೊಬೈಲ್ ಮಾಹಿತಿ ಕದ್ದ ಪ್ರಕರಣದಬಗ್ಗೆ ವಾಟ್ಸಪ್ ಕಂಪನಿಯ ಮೇಲೆ ಕೇಂದ್ರ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ. ಜೂನ್ ತಿಂಗಳಲ್ಲಿ ವಾಟ್ಸಪ್ಮಾತೃ ಕಂಪನಿ ಫೇಸ್ಬುಕ್ಅಧಿಕಾರಿಗಳು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್‌ರನ್ನು ಭೇಟಿಯಾಗಿದ್ದರು. ಆದರೆ ಆಗ ಈ ಮೊಬೈಲ್ ಬೇಹುಗಾರಿಕೆ ಪ್ರಕರಣದ ಬಗ್ಗೆ ಅವರು ಮಾಹಿತಿಯನ್ನೇ ನೀಡಲಿಲ್ಲ. ಭಾರತ ಸರ್ಕಾರವು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ತಡೆಯಲು ನಿಯಮ ಬಿಗಿಗೊಳಿಸುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದಲೇ ಮಾಹಿತಿ ಬಹಿರಂಗಪಡಿಸಲುವಾಟ್ಸಪ್ಅಧಿಕಾರಿಗಳು ಹಿಂದೇಟು ಹಾಕಿದ್ದರು, ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಶಂಕಿಸಿದ್ದಾರೆ. ಈ ರೀತಿ ಬೇಹುಗಾರಿಕೆ ಮಾಡುವವರ ಮೂಲ ಪತ್ತೆ ಮಾಡುವಂಥ ಸಾಫ್ಟ್‌ವೇರ್ ರೂಪಿಸಬೇಕು ಎಂದು ಭಾರತ ಸರ್ಕಾರ ಈ ಹಿಂದೆಯೇ ವಾಟ್ಸಪ್‌ಗೆ ತಾಕೀತು ಮಾಡಿತ್ತು. ಆದರೆಖಾಸಗಿತನಕ್ಕೆ ಧಕ್ಕೆಬರುತ್ತದೆ ಎಂಬ ನೆಪ ಹೇಳಿ ಸಾಫ್ಟ್‌ವೇರ್ ರೂಪಿಸಲು ಅದು ಹಿಂದೇಟು ಹಾಕಿತ್ತು. ಈ ನಡುವೆ, ವಾಟ್ಸಪ್ ದುರ್ಬಳಕೆ ಮಾಡಿಕೊಂಡು ಮೊಬೈಲ್‌ನಲ್ಲಿನ ಮಾಹಿತಿ ಕದಿಯುತ್ತಿರುವ ಸೈಬರ್ ದಾಳಿಕೋರರ ಮೂಲ ಪತ್ತೆ ಮಾಡಿ ಅವರ ಮೇಲೆ ಕಂಪನಿ ಕ್ರಮ ಜರುಗಿಸಲಿದೆ. ಬಳಕೆದಾರರ ಹಿತರಕ್ಷಣೆಗೆ ಕ್ರಮ ಜರುಗಿಸಲಿದೆ ಎಂದು ವಾಟ್ಸಪ್ ವಕ್ತಾರರರು ಹೇಳಿದ್ದಾರೆ.