: ರಾಜ್ಯದಲ್ಲಿ 12,250 ಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿ ಬೆಂಗಳೂರು (ಜ.7):ರಾಜ್ಯದಲ್ಲಿ ( ) ಕೈಗಾರಿಕೆಗಳ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಲು ಮುಂದಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು, 4.236.26 ಕೋಟಿ ರು. ಮೊತ್ತದ 87 ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ರಾಜ್ಯದಲ್ಲಿ ಸುಮಾರು 12,251ಕ್ಕೂ ಹೆಚ್ಚಿನ ಉದ್ಯೋಗಗಳು () ಸೃಷ್ಟಿಯಾಗುವ ನಿರೀಕ್ಷೆ ಇದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ( ) ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ನಡೆದ 128ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಡಬ್ಲ್ಯೂಸಿಸಿ) ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸಮಿತಿಯು 50 ಕೋಟಿ ರು. ಗೂ ಹೆಚ್ಚುಹೂಡಿಕೆಯ 13 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದಕೈಗಾರಿಕಾಯೋಜನೆಗಳಿಗೆ ಅನುಮೋದನೆ ಕೊಟ್ಟಿದೆ. 2,986.80 ಕೋಟಿ ರು. ಮೌಲ್ಯದ ಈ ಯೋಜನೆಗಳಿಗೂ () ರಾಜ್ಯದಲ್ಲಿ 4660 ಜನರಿಗೆ ಉದ್ಯೋಗಾವಕಾಶಗಳನ್ನು () ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಸಮಿತಿಯು ಸಭೆಯಲ್ಲಿ 15 ಕೋಟಿ ರು. ಗಿಂತ ಹೆಚ್ಚಿನ ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 74 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. 1249.46 ಕೋಟಿ ರು. ಮೌಲ್ಯದ ಈ ಯೋಜನೆಗಳು () ರಾಜ್ಯದಲ್ಲಿ 7591 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಒಟ್ಟು 4,236.26 ಕೋಟಿ ರೂ.ಗಳ ಹೂಡಿಕೆಗೆ 12,251 ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಅನುಮೋದಿಸಲಾದ ಹೊಸ ಹೂಡಿಕೆಗಳಲ್ಲಿ ಟೆಕ್ರೆನ್ ಬ್ಯಾಟರಿಸ್ ಪ್ರೈವೇಟ್ ಲಿಮಿಟೆಡ್ 480 ಕೋಟಿ ರು. , ಉದ್ಯೋಗ ಸೃಷ್ಟಿ - 200, ನಿಯೋಟ್ರೆಕ್ಸ್ ಸ್ಟೀಲ್ ಪ್ರೈವೇಟ್ ಲಿಮಿಟೆಡ್‍ನಿಂದ 150 ವ್ಯಕ್ತಿಗಳಿಗೆ ಉದ್ಯೋಗಾವಕಾಶದೊಂದಿಗೆ 340 ಕೋಟಿ ರು. ಹೂಡಿಕೆ, 270 ಉದ್ಯೋಗಗಳೊಂದಿಗೆ ಸೀಮೆನ್ಸ್ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್‍ನಿಂದ 313.20 ಕೋಟಿ ರು. ಹೂಡಿಕೆ ಮಾಡಿದೆ. ಸುಪ್ರೀಮ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್‍ನಿಂದ 306.82 ಕೋಟಿ ರು. ಯೋಜನೆಯು 315 ವ್ಯಕ್ತಿಗಳಿಗೆ ಅಂದಾಜು ಉದ್ಯೋಗ ಸೃಷ್ಟಿ ಮಾಡಲಿದೆ. 1000 ಜನರಿಗೆ ಉದ್ಯೋಗ ಸೃಷ್ಟಿಯೊಂದಿಗೆ ಪವನ್ ಶಕ್ತಿ ಪೇಪರ್ಸ್ ಪ್ರೈವೇಟ್ ಲಿಮಿಟೆಡ್‍ನಿಂದ 276 ಕೋಟಿ ರು. ಯೋಜನೆ ಇದಾಗಿದೆ. ತಾಂಟಿಯಾ ಪೇಪರ್ಸ್ ಪ್ರೈವೇಟ್ ಲಿಮಿಟೆಡ್‍ನಿಂದ 276 ಕೋಟಿ ರು. ಹೂಡಿಕೆಯೊಂದಿಗೆ 1000 ಉದ್ಯೋಗ () ಸೃಷ್ಟಿ, ಮತ್ತು 210 ಕೋಟಿ ರು. ಹೂಡಿಕೆಯೊಂದಿಗೆ ಪುಡ್ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನಿಂದ 310 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕೈಗಾರಿಕೆ ಮತ್ತು ವಾಣಿಜ್ಯ) ಇವಿ ರಮಣ ರೆಡ್ಡಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. 14 ಸಾವಿರ ಹುದ್ದೆಗಳ ನೇಮಕಾತಿ ಶೀಘ್ರ : ಕಲ್ಯಾಣ ಕರ್ನಾಟಕ ( ) ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ () ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( ) ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಕೆಕೆಆರ್ ಡಿಬಿ ( ) ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ ಈ ವಾರದಲ್ಲಿ ಕೆಕೆಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಮನಗರದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿಯ ವರ್ತನೆ ನಮ್ಮ ಕರ್ನಾಟಕದ ಸಂಸ್ಕೃತಿ ಅಲ್ಲ. ಮಾತಿನ ಮೂಲಕ ಸೌಹಾರ್ದಯುತವಾಗಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಬಹುದೇ ಹೊರತು ಇಂತಹ ವರ್ತನೆ ಯಾರಿಗೂ ಶೋಭೆ ತರುವಂಥದಲ್ಲ ಎಂದು ತಿಳಿಸಿದರು.