ಮಹಿಳಾ ಉದ್ಯಮಿಗಳಿಗಾಗಿ ಪ್ರತ್ಯೇಕ ಆರ್ಥಿಕ ಸಂಸ್ಥೆ: ಸಿಎಂ ಬೊಮ್ಮಾಯಿ ಬೆಂಗಳೂರು(ನ.19):ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್‌ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ) ಹೇಳಿದ್ದಾರೆ. ಬೆಂಗಳೂರು(ನ.19):ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್‌ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ) ಹೇಳಿದ್ದಾರೆ. ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಉಬುಂಟು ಸಂಘಟನೆ ಮತ್ತು ಮಹಿಳಾ ಉದ್ಯಮ ಸಂಘದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ( )- ಒಗ್ಗಟ್ಟಾಗಿ ಬೆಳೆಯೋಣ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಗ್ರಾಮೀಣ ಭಾಗದಲ್ಲಿ( ) ಸ್ವ-ಸಹಾಯ ಗುಂಪುಗಳ ಮಾದರಿಯಂತೆ ಮಹಿಳಾ ಉದ್ಯಮಿಗಳನ್ನು( ) ಪ್ರೋತ್ಸಾಹಿಸಲು ರಾಜ್ಯ ಸರ್ಕಾರ( ) ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ಆರಂಭಿಸುವ ಉದ್ದೇಶ ಹೊಂದಿದೆ. ಪ್ರತಿಯೊಬ್ಬ ಮಹಿಳೆಯರೂ() ಆರ್ಥಿಕವಾಗಿ ಸಬಲರಾಗಿ ಮಹಿಳಾ ಉದ್ಯಮಿಗಳಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ಪ್ರಾರಂಭಿಸುವ ಸಂಬಂಧ ಅಧಿಕಾರಿಗಳಿಗೆ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗುವುದು. ಮಹಿಳೆಯರ ಸಬಲೀಕರಣಕ್ಕೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲು ಬದ್ಧವಿದೆ ಎಂದು ಅಭಯ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ವಾರದೊಳಗೆ ಅಂಧ ಮಹಿಳೆಯರಿಗೆ( ) ವಿಶೇಷ ಕಾರ್ಯಕ್ರಮ ರೂಪಿಸಿ, ಉದ್ಯೋಗ() ಹೊಂದುವಂತೆ ಅನುಕೂಲ ಕಲ್ಪಿಸಲಾಗುವುದು. ಈ ಕಾರ್ಯಕ್ರಮ ಘೋಷಣೆಗೆ ಕಾರಣವೂ ಇದೆ. ಕಡು ಬಡವರಾದ ಮೂವರು ಅಂಧ ಮಹಿಳೆಯರು ತಮ್ಮ ಹೆಣ್ಣು ಮಕ್ಕಳೊಂದಿಗೆ ನನ್ನನ್ನು ಭೇಟಿಯಾಗಿದ್ದರು. ಈ ವೇಳೆ ಏನು ಸಹಾಯ ಬೇಕೆಂದು ಕೇಳಿದಾಗ, ನಮಗೆ ಸಹಾಯ ಬೇಕಿಲ್ಲ. ಆದರೆ, ನಮಗೆ ನಾವೇ ಸಹಾಯ ಮಾಡಿಕೊಳ್ಳಲು ಕೆಲಸ ಬೇಕೆಂದು ಕೇಳಿದರು. ತಕ್ಷಣ ಈ ವಿಶೇಷ ಕಾರ್ಯಕ್ರಮ ರೂಪಿಸುವ ತೀರ್ಮಾನ ಕೈಗೊಂಡೆ ಎಂದು ತಿಳಿಸಿದ ಬೊಮ್ಮಾಯಿ ಇದೇ ವೇಳೆ ಉಬುಂಟು ಸದಸ್ಯರೂ ಸಹ ತಮ್ಮ ಉದ್ಯಮ ಸಂಸ್ಥೆಗಳಲ್ಲಿ ಅಂಧರು ಮತ್ತು ದಿವ್ಯಾಂಗರಿಗೆ ಕೆಲಸವನ್ನು ಒದಗಿಸಿ, ಅವರ ಸಹಾಯಕ್ಕೆ ನಿಲ್ಲಬೇಕು ಎಂದು ಸಲಹೆ ನೀಡಿದ ಅವರು, ಉಬುಂಟು ಸಂಸ್ಥೆಯಲ್ಲಿ ಮಾದರಿ ಮಹಿಳೆಯರಿದ್ದಾರೆ. ಮತ್ತೊಬ್ಬರು ಬೆಳೆಯಲು ಸಹಾಯ ಮಾಡಿದರೆ ಯಶಸ್ಸು ಸಂಪೂರ್ಣವಾಗುತ್ತದೆ. 400 ಸದಸ್ಯರಿರುವ ಉಬುಂಟು ಸಂಸ್ಥೆಯ ಎಲ್ಲರೂ ಮುಂದಿನ ವರ್ಷದಲ್ಲಿ ಒಬ್ಬ ವ್ಯಕ್ತಿಯನ್ನು ಬೆಳೆಯಲು ಸಹಾಯ ಮಾಡಿದರೂ ಅದು ಸಮಾಜಕ್ಕೆ ನೀಡುವ ಬಹು ದೊಡ್ಡ ಕೊಡುಗೆಯಾಗಲಿದೆ ಎಂದ ಬಸವರಾಜ ಬೊಮ್ಮಾಯಿ 2019ರ ಕೈಗಾರಿಕಾ ನೀತಿ( ) ಒಳಗೊಂಡಿದ್ದ ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರೋತ್ಸಾಹಕಗಳನ್ನು 2020-2025ರ ನೀತಿಯಲ್ಲಿ ಸೇರ್ಪಡೆಗೊಳಿಸಲಾಗುವುದು. ಮಹಿಳಾ ಉದ್ಯಮಿಗಳಿಗೆ ನೀಡುವ ಅನುದಾನದಲ್ಲಿ ರಿಯಾಯಿತಿ ಈಗಾಗಲೇ ನೀಡಲಾಗುತ್ತಿದ್ದು, ಜಮೀನು() ಖರೀದಿಗೆ ರಿಯಾಯಿತಿ ಒದಗಿಸಲು ಚಿಂತನೆ ನಡೆಸಲಾಗುವುದು. ಐಟಿ-ಬಿಟಿಗೆ(-) ಇರುವ ರೀತಿಯಲ್ಲಿಯೇ ಕಾರ್ಯಕ್ರಮಗಳನ್ನು ಮಹಿಳಾ ಉದ್ಯಮಿಗಳಿಗೂ ರೂಪಿಸಲಾಗುವುದು ಎಂದು ಆಶ್ವಾಸನೆ ನೀಡಿದ ಬೊಮ್ಮಾಯಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ( ) ಮಾತನಾಡಿ, ಮಹಿಳೆಯರ ಉದ್ಯಮಕ್ಕೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ಗಳನ್ನು ಪ್ರಾರಂಭಿಸಲಿದೆ. ಕಲಬುರಗಿ, ಮೈಸೂರು, ಧಾರವಾಡ, ಹಾರೋಹಳ್ಳಿಯಲ್ಲಿ ಇವುಗಳು ತಲೆ ಎತ್ತಲಿವೆ. ದೇಶದಲ್ಲಿಯೇ ಮೊದಲ ಬಾರಿಗೆ ಮಹಿಳೆಯರಿಗಾಗಿ ಉದ್ಯಮ ಪಾರ್ಕ್‌ಗಳನ್ನು ಆರಂಭಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ() ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ರತ್ನಪ್ರಭ ಸೇರಿದಂತೆ ಇತರರು ಉಪಸ್ಥಿತರಿದ್ದರು.