22 ರಾಜ್ಯಗಳಲ್ಲಿ ಇಳಿದ ಪೆಟ್ರೋಲ್, ಡೀಸೆಲ್ ದರ - ಎಲ್ಲಿ ಹೆಚ್ಚು..? ನವದೆಹಲಿ (ನ.06):ಕೇಂದ್ರ ಸರ್ಕಾರ ( ) ಪೆಟ್ರೋಲ್ () ಹಾಗು ಡೀಸೆಲ್ () ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೇಶದ 22 ರಾಜ್ಯಗಳಲ್ಲಿ ಹಾಗು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ( ) ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಇಳಿಸಿದ್ದು ಗ್ರಾಹಕರಿಗೆ ರಿಲೀಫ್ ನೀಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ( ) ಹೇಳಿದೆ. ಆದರೆ ದೇಶದ 14 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ( ) ಮಾತ್ರ ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ. ದೆಹಲಿ (), ಪಶ್ಚಿಮ ಬಂಗಾಳ ( ), ತಮಿಳುನಾಡು (), ತೆಲಂಗಾಣ (), ಆಂಧ್ರ ಪ್ರದೇಸ, ಕೇರಲ, ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್, ಜಾರ್ಖಂಡ್, ಒಡಿಶಾ, ಚತ್ತೀಸ್‌ಗಢ, ಪಂಜಾಬ್, ರಾಜಸ್ತಾನಗಳಲ್ಲಿ ಇಳಿಕೆ ಮಾಡಿಲ್ಲ. " ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ಮತ್ತುಡೀಸೆಲ್ಮೇಲೆ 10 ರು. ಇಳಿಕೆ ಮಾಡಲಾಗಿತ್ತು. ಉತ್ತರಾಖಂಡ್‌ನ () ಲಡಾಕ್‌ನಲ್ಲಿ () ಅತ್ಯಂತ ಹೆಚ್ಚು ಬೆಲೆ ಇಳಿದಿದ್ದು, ಅದಾದ ಬಳಿಕ ಹೆಚ್ಚಿನ ಬೆಲೆ ಇಳಿಕೆ ಕರ್ನಾಟಕ ಹಾಗು ಪುದುಚೆರಿಗಳಲ್ಲಾಗಿತ್ತು. ಕರ್ನಾಟಕದಲ್ಲಿ () ಪೆಟ್ರೋಲ್ ಬೆಲೆ 19.61 ಪ್ರತೀ ಲೀಟರ್‌ಗೆ ಇಳಿಕೆ ಮಾಡಲಾಗಿತ್ತು. ಬೊಕ್ಕಸಕ್ಕೆ ಭಾರೀ ನಷ್ಟ ನವದೆಹಲಿ/ಬೆಂಗಳೂರು(ನ.05): ದೇಶದ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ( ) ದೀಪಾವಳಿಯ ( 2021) ಸಿಹಿಸುದ್ದಿ ನೀಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌( ) ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿವೆ. ಕೇಂದ್ರ ಸರ್ಕಾರವು ( ) ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 5 ರು. ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು 10 ರು. ಇಳಿಕೆ ಮಾಡಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದಲ್ಲಿ ತಲಾ 7 ರು. ದರ ಕಡಿತ ಘೋಷಿಸಿದೆ. ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್‌ ದರ 12 ರು. ಹಾಗೂ ಡೀಸೆಲ್‌ ದರ 17 ರು. ಕಡಿತವಾಗಲಿದೆ. ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್‌ ದರ ( ) ಇನ್ನು 102 ರು. ಹಾಗೂ ಡೀಸೆಲ್‌ ದರ ( ) 87 ರು.ಗೆ ಇಳಿಯುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ದರ ಕಡಿತ ಗುರುವಾರದಿಂದಲೇ ಜಾರಿಗೆ ಬಂದಿದ್ದು, ರಾಜ್ಯ ಸರ್ಕಾರದ ಘೋಷಣೆ ಶುಕ್ರವಾರ ಜಾರಿಗೆ ಬಂದಿದೆ. ಇಷ್ಟೊಂದು ದೊಡ್ಡ ಮೊತ್ತದ ಕಡಿತ ಇದೇ ಮೊದಲು. ಹೀಗಾಗಿ ರಾಜ್ಯದ ಜನರಿಗೆ ದೊಡ್ಡ ನಿರಾಳತೆ ಉಂಟಾಗಿದೆ. ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬುಧವಾರ ಅಬಕಾರಿ ಸುಂಕ ಕಡಿತ ಮಾಡಿದ್ದ ಕೇಂದ್ರವು, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಗಳನ್ನು ಕಡಿತಗೊಳಿಸುವಂತೆ ರಾಜ್ಯಗಳಿಗೂ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಿತ ಘೋಷಣೆ ಮಾಡಿದ್ದಾರೆ. ದರ ಕಡಿತ ಘೋಷಣೆಗೂ ಮುನ್ನ ಬೆಂಗಳೂರಿನಲ್ಲಿ ಪೆಟ್ರೋಲ್‌ಗೆ 113.93 ರು. ಹಾಗೂ ಡೀಸೆಲ್‌ಗೆ 104.50 ರು. ದರ ಇತ್ತು. ದೊಡ್ಡ ರಿಲೀಫ್‌ ಕೊಟ್ಟಿದ್ದೇವೆ- ಕೇಂದ್ರ: ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪೆಟ್ರೋಲ್‌ ಮೇಲಿನ ಸುಂಕಕ್ಕಿಂತ 2ರಷ್ಟುಹೆಚ್ಚಿಗೆ ಇಳಿಸಲಾಗಿದೆ. ಈ ಕ್ರಮದಿಂದ ಹಿಂಗಾರು ಬೆಳೆಗಳ ಬಿತ್ತನೆ ಮಾಡುತ್ತಿರುವ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಕೊರೋನಾದಂಥ ಸಂಕಷ್ಟದ ಸಂದರ್ಭದಲ್ಲೂ ಕಠಿಣ ಪರಿಶ್ರಮದ ಮುಖಾಂತರ ದೇಶದ ಆರ್ಥಿಕಾಭಿವೃದ್ಧಿಯನ್ನು ರೈತರು ಸುಸ್ಥಿತಿಯಲ್ಲಿಟ್ಟಿದ್ದರು. ಅವರಿಗೆ ದರ ಇಳಿಕೆಯಿಂದ ದೊಡ್ಡ ನಿರಾಳತೆ ಲಭಿಸಲಿದೆ ಎಂದು ಹೇಳಿದೆ. ಕೇಂದ್ರ ಸರ್ಕಾರಕ್ಕೆ ಇದರಿಂದ ವಾರ್ಷಿಕ 1 ಲಕ್ಷ ಕೋಟಿ ರು. ಹೊರೆಯಾಗಲಿದೆ. ರಾಜ್ಯಕ್ಕೆ 2100 ಕೋಟಿ ರು. ಹೊರೆ: ಕರ್ನಾಟಕ ಪಾಲಿನ ದರ ಇಳಕೆ ಘೋಷಿಸಿ ಬಗ್ಗೆ ಬುಧವಾರ ರಾತ್ರಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ನಿರ್ಧಾರ ಗುರುವಾರ ಸಂಜೆಯಿಂದ ಅನ್ವಯವಾಗಲಿದೆ. ರಾಜ್ಯ ಸರ್ಕಾರಕ್ಕೆ ಬೊಕ್ಕಸಕ್ಕೆ ಅಂದಾಜು 2,100 ಕೋಟಿ ರು. ನಷ್ಟವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೈಲ ಬೆಲೆ ಕಡಿಮೆಗೊಳಿಸಿದ್ದು ಸ್ವಾಗತಾರ್ಹ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ ಎಂದಿದ್ದಾರೆ. 39, 30 ರು. ಏರಿಕೆಯಾಗಿತ್ತು: ಪ್ರತಿ ದಿನ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳ ಪರಿಷ್ಕರಣೆಯಿಂದಾಗಿ ಕಳೆದ 18 ತಿಂಗಳ ಅವಧಿಯಲ್ಲಿ ಪೆಟ್ರೋಲ್‌ ಬೆಲೆ ಒಟ್ಟಾರೆ 38.93 ರು.ನಷ್ಟುಹೆಚ್ಚಳವಾಗಿದ್ದರೆ, ಡೀಸೆಲ್‌ ದರ 29.24 ರು.ನಷ್ಟುಹೆಚ್ಚಳವಾಗಿತ್ತು. ಅಲ್ಲದೆ ಕಳೆದ ವರ್ಷ ಕೊರೋನಾ ಸೋಂಕು ವ್ಯಾಪಕವಾದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರೀ ಕುಸಿತವಾಗಿತ್ತು. ಆಗ 19.98 ರು. ಇದ್ದ ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕವನ್ನು 32.9 ರು.ಗೆ ಏರಿಕೆ ಮಾಡಲಾಗಿತ್ತು.