ಪರಹಿತಕ್ಕಾಗಿ ಸ್ವಹಿತ ತ್ಯಾಗ ಮಾಡೋಣ : ರಾಘವೇಶ್ವರ ಶ್ರೀ ಪ್ರೇಮ ಇದ್ದಲ್ಲಿ ಕರುಣೆ ಇರುತ್ತದೆ. ನಮ್ಮ ಹಿತವನ್ನು ತ್ಯಾಗ ಮಾಡಿಯಾದರೂ ಪರರ ಕಷ್ಟಕ್ಕೆ ಸ್ಪಂದಿಸಬೇಕು. ಇಂಥ ಗುಣಗಳನ್ನು ಪ್ರಾಣಿ, ಪಕ್ಷಿಗಳಿಂದ, ಲೋಕನಾಯಕ ಶಿವನಿಂದ ಪಡೆಯೋಣ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಗೋಕರ್ಣ (ಆ.23) :ಪ್ರೇಮ ಇದ್ದಲ್ಲಿ ಕರುಣೆ ಇರುತ್ತದೆ. ನಮ್ಮ ಹಿತವನ್ನು ತ್ಯಾಗ ಮಾಡಿಯಾದರೂ ಪರರ ಕಷ್ಟಕ್ಕೆ ಸ್ಪಂದಿಸಬೇಕು. ಇಂಥ ಗುಣಗಳನ್ನು ಪ್ರಾಣಿ, ಪಕ್ಷಿಗಳಿಂದ, ಲೋಕನಾಯಕ ಶಿವನಿಂದ ಪಡೆಯೋಣ ಎಂದು ರಾಮಚಂದ್ರಾಪುರ ಮಠ( )ದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ( ) ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ( ) ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದ ಅವರು, ಪ್ರೇಮ ಹಾಗೂ ಕರುಣೆ ಪತಿ-ಪತ್ನಿ ಇದ್ದಂತೆ. ಜಗತ್ತಿನ ಮೇಲೆ ಪ್ರೀತಿ ಇಟ್ಟಿರುವ ಭಗವಂತ ಅಂಥ ಕರುಣೆಯನ್ನು ಜಗತ್ತಿನ ಎಲ್ಲ ಜೀವ ಜಂತುಗಳ ಮೇಲೆ ಹೊಂದಿರುತ್ತಾನೆ. ಇನ್ನೊಬ್ಬರ ಕಷ್ಟಪರಿಹಾರ ಮಾಡಲು ತಾವೇ ಸಂಕಷ್ಟತೆಗೆದುಕೊಳ್ಳುವವರು ಸತ್ಪುರುಷರು ಎಂದು ಬಣ್ಣಿಸಿದರು. ಸೇವೆಯ ಸಮಾಧಾನ ಭೋಗದಲ್ಲಿಲ್ಲ: ರಾಘವೇಶ್ವರ ಶ್ರೀ ಕರುಣಾಮೂರ್ತಿಗಳಾದ ಸಂತರು ಬೇರೆಯವರ ಕಷ್ಟಗಳನ್ನು ತಾವೇ ಆವಾಹನೆ ಮಾಡಿಕೊಳ್ಳುತ್ತಾರೆ. ಪ್ರಪಂಚದ ಕಷ್ಟಗಳನ್ನು ರಾಮ, ಕೃಷ್ಣ, ಶಂಕರಾಚಾರ್ಯರು ಹೀಗೆ ಎಷ್ಟೋ ಮಹಾಪುರುಷರು ತಾವೇ ಪಡೆದುಕೊಂಡಿದ್ದಾರೆ. ಭಕ್ತರ ಕಷ್ಟಮಾರ್ಗದರ್ಶನದಿಂದ ಪರಿಹಾರವಾಗುತ್ತದೆ. ಇಂಥ ಮಾರ್ಗದಿಂದ ಕೆಲವೊಮ್ಮೆ ಪರಿಹಾರವಾಗದಿದ್ದಾಗ ಅವರ ಪಾಪ, ದುಃಖವನ್ನು ತಾವು ಸ್ವೀಕರಿಸಿ ಅನುಭವಿಸುವ ಸಂದರ್ಭ ಮಹಾಪುರುಷರಿಗೆ ಬರುತ್ತದೆ ಎಂದು ವಿಶ್ಲೇಷಿಸಿದರು. ಉತ್ತಮ ರಾಜ ಕೂಡ ತನ್ನ ಸುಖವನ್ನು ಪ್ರಜೆಗಳ ಜತೆ ಹಂಚಿಕೊಳ್ಳಬೇಕು. ಪ್ರಜೆಗಳ ಕಷ್ಟಗಳಿಗೆ ಸ್ಪಂದಿಸಬೇಕು. ಬದಲಾಗಿ ಜನರ ಸುಖದಲ್ಲಿ ಪಾಲು ಪಡೆಯುವಂತಿರಬಾರದು ಎನ್ನುವುದು ಭಾರತದ ಚಕ್ರವರ್ತಿಗಳ ಪರಿಕಲ್ಪನೆ ಎಂದು ಉದಾಹರಣೆ ಸಹಿತ ವಿವರಿಸಿದರು. ಅಮೆರಿಕದ ಯೆಲ್ಲೋಸ್ಟೋನ್‌ ನ್ಯಾಷನಲ್‌ ಫಾರೆಸ್ಟ್‌ನಲ್ಲಿ ಕಾಳ್ಗಿಚ್ಚು ಹರಡಿದ ವೇಳೆ ಮರಗಿಡಗಳು, ಬಳ್ಳಿ, ಪ್ರಾಣಿ ಪಕ್ಷಿಗಳು ಸೇರಿದಂತೆ ಕ್ರಿಮಿಕೀಟಗಳು ಜೀವಂತ ಸಮಾಧಿಯಾದವು. ಅದರ ನಷ್ಟಅಂದಾಜಿಸಲು ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳುತ್ತಿರುವಾಗ ಸುಟ್ಟು ಕರಕಲಾದ ಪಕ್ಷಿಯ ಬೂದಿ ಅವರಿಗೆ ಪಕ್ಷಿಯ ಆಕೃತಿಯಲ್ಲೇ ಕಾಣುತ್ತದೆ. ಆ ಪಕ್ಷಿಯನ್ನು ನೋಡಿದಾಗ ತನ್ನ ರೆಕ್ಕೆ ಬಿಚ್ಚಿಟ್ಟುಕೊಂಡ ಭಂಗಿಯಲ್ಲೇ ಅದು ಭಸ್ಮವಾಗಿದ್ದವು. ಅದನ್ನು ಪರಾಂಬರಿಸಿ ನೋಡಿದಾಗ ಮೂರು ಪುಟ್ಟಮರಿಗಳು ಹೊರಗೆ ಬಂದವು. ಪರಿಸ್ಥಿತಿ ವೀಕ್ಷಿಸಿದಾಗ ಅಧಿಕಾರಿಗಳು ಧಾರಾಕಾರ ಕಣ್ಣೀರು ಸುರಿಸಿದರು. ಫಿಲ್ಮ್ ಫೇರ್ ಪ್ರಶಸ್ತಿ ವಿರುದ್ಧ ನಟಿ ಕಂಗನಾ ಗರಂ; ನಾಮನಿರ್ದೇಶನ ಹಿಂಪಡೆದ ಕಮಿಟಿ ಕಾಳ್ಗಿಚ್ಚಿನ ಬೆಂಕಿ ಮತ್ತು ಹೊಗೆಯಿಂದ ತನ್ನ ಪುಟ್ಟಮರಿಗಳನ್ನು ರಕ್ಷಿಸಲು ಮರಿಗಳನ್ನು ಗುಂಪು ಸೇರಿಸಿ, ತನ್ನ ರೆಕ್ಕೆ ಹರಡಿ ಅದರ ಅಡಿಯಲ್ಲಿ ಮರಿಗಳನ್ನು ರಕ್ಷಿಸಿತ್ತು. ಬೆಂಕಿಯ ಝಳಕ್ಕೆ ಸುಟ್ಟು ಕರಕಲಾದಾಗಲೂ ತಾನು ಸ್ವಲ್ಪವೂ ಸರಿಯದೇ ಮರಿಗಳನ್ನು ಸುರಕ್ಷಿತವಾಗಿ ಕಾಪಾಡಿತ್ತು. ಮರಿಗಳ ಬಗೆಗಿನ ತಾಯಿಪಕ್ಷಿಯ ಕರುಣೆಯ ಪರಿ ಅಂಥದ್ದು ಎಂದು ಬಣ್ಣಿಸಿದರು. ಗೋಕರ್ಣ: ರಾಘವೇಶ್ವರ ಶ್ರೀ ಭೇಟಿಯಾದ ಡಾ. ವೀರೇಂದ್ರ ಹೆಗ್ಗಡೆ ಇಂಥದ್ದೇ ಕಥೆ ರಾಮಾಯಣದಲ್ಲೂ ಕಂಡುಬರುತ್ತದೆ. ಅರುಣನ ಮಕ್ಕಳಾದ ಸಂಪಾತಿ ಮತ್ತು ಜಟಾಯು ಇಬ್ಬರೂ ಪಕ್ಷಿರಾಜರು. ಇಬ್ಬರಲ್ಲೂ ಒಮ್ಮೆ ಸ್ಪರ್ಧೆ ಹುಟ್ಟಿ, ಹೆಚ್ಚು ವೇಗ ಹಾಗೂ ದೂರವಾಗಿ ಯಾರು ಹಾರುತ್ತಾರೆ ಎಂಬ ಪೈಪೋಟಿ ಏರ್ಪಟ್ಟಿತು. ಅಸ್ತ ಪರ್ವತದವರೆಗೆ ಸೂರ್ಯನನ್ನು ಹಿಂಬಾಲಿಸುವ ಪಂಥಾಹ್ವಾನದಂತೆ ಇಬ್ಬರೂ ಮುಗಿಲು ದಾಟಿ ಬಾನೆತ್ತರಕ್ಕೆ ಹಾರುತ್ತವೆ. ಆಗ ಸೂರ್ಯರಶ್ಮಿಗಳು ಇಬ್ಬರನ್ನೂ ಸುಡಲು ಆರಂಭಿಸಿತು. ಸಹಿಸಲಸಾಧ್ಯ ಝಳದ ಸ್ಥಿತಿಯಲ್ಲಿ ಸಂಪಾತಿ ಕಣ್ಣು ಬಿಟ್ಟು ನೋಡಿದಾಗ ಜಟಾಯುವಿಗೆ ಹಾರಲು ಸಾಧ್ಯವಾಗಲಿಲ್ಲ. ತಮ್ಮ ಕೆಳಕ್ಕೆ ಬೀಳುತ್ತಿರುವುದು ನೋಡಿದಾಗ ಅಣ್ಣ ಸಂಪಾತಿ ತನ್ನ ರೆಕ್ಕೆಗಳಿಂದ ಆತನನ್ನು ಮುಚ್ಚಿಸಿ ರಕ್ಷಿಸಿದ ಎನ್ನುವ ಉಲ್ಲೇಖ ರಾಮಾಯಣದಲ್ಲಿದೆ. ತಮ್ಮನನ್ನು ರಕ್ಷಿಸಲು ಅಣ್ಣ ತನ್ನ ರೆಕ್ಕೆ ಸುಟ್ಟುಕೊಳ್ಳುತ್ತಾನೆ ಎಂದು ವಿವರಿಸಿದರು. ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರು ಸೋಮವಾರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೃಷಿ ಇಲಾಖೆ ಮುಂಗಾರು ಬೆಳೆ ಸ್ಪರ್ಧೆ ,ಕೃಷಿ ಪ್ರಶಸ್ತಿ ಆಯ್ಕೆಗೆ ಅರ್ಜಿಗಳ ಆಹ್ವಾನ