: ಕರ್ನಾಟಕದಲ್ಲಿ 2,52,902 ಸರ್ಕಾರಿ ಹುದ್ದೆ ಖಾಲಿ: ಬೊಮ್ಮಾಯಿ * ಮಂಜೂರಾದ 7.68 ಲಕ್ಷ ಹುದ್ದೆಗಳಲ್ಲಿ 5.16 ಲಕ್ಷ ಹುದ್ದೆ ಭರ್ತಿ* ಕೊರೋನಾ ಕಾರಣದಿಂದ ನೇಮಕಾತಿಗೆ ನಿರ್ಬಂಧ* 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ ಬೆಂಗಳೂರು(ಮಾ.18):ರಾಜ್ಯದಲ್ಲಿ() ಇರುವ 38 ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ, 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ) ತಿಳಿಸಿದರು. ಜೆಡಿಎಸ್‌() ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್‌(-19) ಕಾರಣದಿಂದ ನೇಮಕಾತಿಗೆ() ನಿರ್ಬಂಧಗಳಿದ್ದರೂ ಸಹ ಶಿಕ್ಷಣ, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಗಳ ನೇಮಕಾತಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು. 2022: ಬೆಂಗಳೂರಿನಲ್ಲಿ ಮಾರ್ಚ್ 27ರಂದು ಉದ್ಯೋಗ ಮೇಳ ಹೆಚ್ಚು ಹುದ್ದೆಗಳು ಖಾಲಿ ಇರುವುದರಿಂದ ಹಾಲಿ ನೌಕರರ ಮೇಲೆ ಒತ್ತಡ ಹೆಚ್ಚಾಗಿರುವುದು ನಿಜ, ಸದ್ಯ 91 ಸಾವಿರ ನೌಕರರು ಗುತ್ತಿಗೆ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ಪೈಕಿ 57 ಸಾವಿರ ಕೌಶಲ್ಯರಹಿತ ಸಿಬ್ಬಂದಿಗಳಿದ್ದಾರೆ, ಖಾಲಿ ಇರುವ ಹುದ್ದೆಗಳು ಭರ್ತಿಯಾಗುವವರೆಗೂ ತಾತ್ಕಾಲಿಕವಾಗಿ ಅಧಿಕ ಪ್ರಭಾರ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಮುಂಬಡ್ತಿ, ನಿಯೋಜನೆ, ಅನ್ಯಸೇವೆ, ಗುತ್ತಿಗೆ, ಹೊರಗುತ್ತಿಗೆ ಮೂಲಕ ಸಿಬ್ಬಂದಿ ಕೊರತೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಕೆ.ಟಿ. ಶ್ರೀಕಂಠೇಗೌಡ ಅವರು, ದೊಡ್ಡ ಸಂಖ್ಯೆಯಲ್ಲಿ ಸರ್ಕಾರಿ ಹುದ್ದೆಗಳನ್ನು( ) ಭರ್ತಿ ಮಾಡಿಕೊಳ್ಳದೇ ಇರುವುದರಿಂದ ಸರ್ಕಾರಿ ಕೆಲಸಗಳು ವಿಳಂಬವಾಗಿ ಇತ್ಯರ್ಥವಾಗುತ್ತಿದೆ. ಇರುವ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಹಾಗಾಗಿ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು, ಕೆಲವರು ಎರಡು ಮೂರು ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ. ಅನುದಾನಿತ ಶಾಲೆಗಳಲ್ಲಿ ಈ ಹಿಂದೆ ಹುದ್ದೆ ತೆರವಾದ ತಕ್ಷಣ ನೇಮಕಾತಿಗೆ ಅವಕಾಶ ಕೊಡಲಾಗುತ್ತಿತ್ತು. ಆದರೆ ಕಳೆದ ಏಳು ವರ್ಷಗಳಿಂದ ನೇಮಕಾತಿ ಆಗಿಲ್ಲ. ಶಿಕ್ಷಕರ ನೇಮಕಾತಿಗೆ ಇರುವ ನಿರ್ಬಂಧ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಕರ್ನಾಟಕಕ್ಕೆ 12,909 ಕೋಟಿ ಬಾಕಿ: ಸಿಎಂ ಬೊಮ್ಮಾಯಿ ಬೆಂಗಳೂರು: ಕೇಂದ್ರ ಸರ್ಕಾರ ನೀಡುವ ಜಿಎಸ್‌ಟಿ ಪರಿಹಾರವು( ) 12,909 ಕೋಟಿ ರು. ಬಾಕಿ ಇದ್ದು, ರಾಜ್ಯಕ್ಕೆ ಮುಂಬರುವ ವರ್ಷದಲ್ಲಿ ಪಾವತಿಸುವ ಕುರಿತು ಕೇಂದ್ರ ತಿಳಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಬಜೆಟ್‌( ) ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಆರ್ಥಿಕ ವರ್ಷ 2017-18ನೇ ಸಾಲಿನಿಂದ ಶೇ.14ರ ಪ್ರಮಾಣದಲ್ಲಿ ರಾಜ್ಯದ ಅಭಿವೃದ್ಧಿ ಇದೆ. ರಾಜ್ಯಕ್ಕೆ ಜಿಎಸ್‌ಟಿ ಪರಿಹಾರವಾಗಿ 97,688 ಕೋಟಿ ರು. ಬರಬೇಕಾಗಿದ್ದು, ಈವರೆಗೆ ಒಟ್ಟು 54,263 ಕೋಟಿ ರು. ಬಂದಿದೆ. 30,516 ಕೋಟಿ ರು. ಸಾಲದ ರೂಪದಲ್ಲಿ ನೀಡಲಾಗಿದೆ. ಇನ್ನು 12,909 ಕೋಟಿ ರು. ಬಾಕಿ ಇದೆ. ಮುಂಬರುವ ವರ್ಷದಲ್ಲಿ ಕೇಂದ್ರವು( ) ನೀಡುವ ಭರವಸೆ ಇದೆ ಎಂದರು. 2022: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಕೆಲವು ಸಂದರ್ಭದಲ್ಲಿ ಅಭಿವೃದ್ಧಿ ಪ್ರಮಾಣ ಕಡಿಮೆಯೂ ಆಗಿದೆ. ಆದರೂ ರಾಜ್ಯದ ಅರ್ಥಿಕತೆಯನ್ನು ಸಮಾತೋಲನ ಕಾಯ್ದುಕೊಳ್ಳಲಾಗಿದೆ. ಸಂಪೂರ್ಣವಾಗಿ ವಿಶ್ಲೇಷಣೆ ಮಾಡಿದಾಗ ಸತ್ಯಾಂಶ ತಿಳಿಯಲಿದೆ. ಕೋವಿಡ್‌ನಂತಹ ಸಮಯದಲ್ಲಿ ಆರ್ಥಿಕತೆ ಕಡಿಮೆಯಾಗುತ್ತದೆ ಎಂದು ಹೇಳಿದರು. ಪ್ರತಿಪಕ್ಷದ ನಾಯಕರು ರಾಜ್ಯ ಸರ್ಕಾರವು( ) ಸಾಲದ ಮೊತ್ತ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಸಾಲ ಮೊತ್ತದ ಹೆಚ್ಚಾಗಲು ಕಾರಣಗಳೇನು ಎಂಬುದನ್ನು ಅವಲೋಕಿಸದೆ ಟೀಕೆ ಮಾಡಬಾರದು. ಎರಡು ವರ್ಷದಲ್ಲಿ ಕೋವಿಡ್‌(-19) ನಿಯಂತ್ರಣಕ್ಕಾಗಿ 15,645 ಕೋಟಿ ರು. ವೆಚ್ಚ ಮಾಡಲಾಗಿದೆ. ಅಲ್ಲದೇ, ಅಬಕಾರಿ ಹೊರತುಪಡಿಸಿದರೆ ಇತರೆ ತೆರಿಗೆಯ ಸ್ವೀಕೃತಿ ಕಡಿಮೆಯಾಗಿದೆ. 20-21ನೇ ಸಾಲಿನಲ್ಲಿ ಅಬಕಾರಿ ಇಲಾಖೆಯಲ್ಲಿ 636 ಕೋಟಿ ರು. ಹೆಚ್ಚಳವಾದರೆ, ಇನ್ನುಳಿದ ತೆರಿಗೆ ಇಲಾಖೆಯಲ್ಲಿ ಕಡಿಮೆಯಾಗಿದೆ. ವಾಣಿಜ್ಯ ತೆರಿಗೆಯಲ್ಲಿ( ) 11,404 ಕೋಟಿ ರು., ಮೋಟಾರು ವಾಹನದಲ್ಲಿ 2079 ಕೋಟಿ ರು., ನೋಂದಣಿ ಮತ್ತು ಮುದ್ರಾಂಕದಲ್ಲಿ 1500 ಕೋಟಿರು, ಇತರೆ ತರಿಗೆಯಲ್ಲಿ 540 ಕೋಟಿ ರು., ಕಡಿಮೆಯಾಗಿದೆ. ಕೇಂದ್ರದ ತೆರಿಗೆ ಪಾಲಿನಲ್ಲಿಯೂ ಕಡಿಮೆಯಾಗಿದ್ದು, ರಾಜ್ಯ ಸರ್ಕಾರ ಮಾಡಿದ ಅಂದಾಜಿಗಿಂತ 21,835 ಕೋಟಿ ರು. ಕಡಿಮೆಯಾಯಿತು. ಈ ಎಲ್ಲಾ ಕಾರಣಗಳಿಗಾಗಿ ಖರ್ಚು ನಿಭಾಯಿಸಲು ಅನಿವಾರ್ಯವಾಗಿ ಸಾಲವನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡರು.